ಹುತಾತ್ಮ ಯೋಧರ ಕುಟುಂಬಗಳಿಗೆ 1 ಕೋಟಿ ರೂ ಪರಿಹಾರ: ರಾಜನಾಥ್ ಸಿಂಗ್

Published : May 20, 2017, 04:59 PM ISTUpdated : Apr 11, 2018, 12:42 PM IST
ಹುತಾತ್ಮ ಯೋಧರ ಕುಟುಂಬಗಳಿಗೆ 1 ಕೋಟಿ ರೂ ಪರಿಹಾರ: ರಾಜನಾಥ್ ಸಿಂಗ್

ಸಾರಾಂಶ

ಹುತಾತ್ಮ ಯೋಧರ ಕುಟುಂಬಗಳಿಗೆ 1 ಕೋಟಿ ಪರಿಹಾರ ನೀಡಲಾಗುವುದು ಎಂದು ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಚೀನಾ ಗಡಿಭಾಗದಲ್ಲಿರುವ 5 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಗ್ಯಾಂಗ್’ಟಕ್’ನಲ್ಲಿ ನಡೆದ ಭದ್ರತಾ ಪರಿಶೀಲನಾ ಸಭೆಯಲ್ಲಿ ರಾಜನಾಥ್ ಸಿಂಗ್ ಈ ಘೋಷಣೆ ಮಾಡಿದ್ದಾರೆ.

ನವದೆಹಲಿ (ಮೇ.20): ಹುತಾತ್ಮ ಯೋಧರ ಕುಟುಂಬಗಳಿಗೆ 1 ಕೋಟಿ ಪರಿಹಾರ ನೀಡಲಾಗುವುದು ಎಂದು ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಚೀನಾ ಗಡಿಭಾಗದಲ್ಲಿರುವ 5 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಗ್ಯಾಂಗ್’ಟಕ್’ನಲ್ಲಿ ನಡೆದ ಭದ್ರತಾ ಪರಿಶೀಲನಾ ಸಭೆಯಲ್ಲಿ ರಾಜನಾಥ್ ಸಿಂಗ್ ಈ ಘೋಷಣೆ ಮಾಡಿದ್ದಾರೆ.

ಹುತಾತ್ಮ ಯೋಧರ ಕುಟುಂಬಗಳಿಗೆ (ಸಿಎಪಿಎಫ್) 1 ಕೋಟಿ ಪರಿಹಾರ ನೀಡುವ ಭರವಸೆ ನೀಡುತ್ತಿದ್ದೇನೆ. 34 ಸಾವಿರ ಪ್ಯಾರಾಮಿಲಿಟರಿ ಕಾನ್ಸ್’ಟೇಬಲ್’ಗಳನ್ನು ಹೆಡ್ ಕಾನ್ಸ್ ಟೇಬಲ್ ಗಳಾಗಿ ಉನ್ನತ ದರ್ಜೆಗೇರಿಸಲಾಗುವುದು. ನಮ್ಮ ಯೋಧರ ಸಮಸ್ಯೆಗಳನ್ನು ತಿಳಿದುಕೊಳ್ಳುವುದು ನಮ್ಮ ಕರ್ತವ್ಯ. ಹಾಗಾಗಿ ಅವರ ಸಮಸ್ಯೆಗಳನ್ನು ಹೇಳಿಕೊಳ್ಳಲು ಗೃಹ ಇಲಾಖೆಯು ಮೊಬೈಲ್ ಅಪ್ಲಿಕೇಶನ್’ನನ್ನು ಪ್ರಾರಂಭಿಸಿದೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.

ನಿನ್ನೆ ಭಾರತ-ಚೀನಾ ಗಡಿ ಪ್ರದೇಶಗಳಿಗೆ ಭೇಟಿ ನೀಡಿ ಭದ್ರತಾ ಸ್ಥಿತಿಯನ್ನು ಅವಲೋಕಿಸಿದರು. ಅರೆಸೈನಿಕದಳ ಸುಧಾರಣೆಗಾಗಿ ಸಾಕಷ್ಟು ಕ್ರಮ ಕೈಗೊಳ್ಳಲಾಗಿದೆ. ಮುಂಬರುವ ದಿನಗಳಲ್ಲಿ ಇನ್ನಷ್ಟು ಸುಧಾರಣೆಗಳನ್ನು ಮಾಡಲಾಗುವುದು ಎಂದು ರಾಜನಾಥ್ ಸಿಂಗ್ ಹೇಳಿದರು.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನನ್ನ-ಸಿಎಂ ಸಿದ್ದರಾಮಯ್ಯ ನಡುವೆ ಒಪ್ಪಂದವಾಗಿದೆ: ಡಿ.ಕೆ.ಶಿವಕುಮಾರ್ ಹೇಳಿಕೆ ಹಾಟ್ ಟಾಪಿಕ್!
ತೋಷಖಾನಾ–2 ಪ್ರಕರಣ: ಇಮ್ರಾನ್ ಖಾನ್–ಬುಷ್ರಾ ಬೀಬಿಗೆ ತಲಾ 17 ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಪಾಕಿಸ್ತಾನ ಕೋರ್ಟ್!