
ಮಂಗಳೂರು(ಜ.07): ಕೋಮುದ್ವೇಷದಿಂದ ಹಲ್ಲೆಗೊಳಗಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ವ್ಯಾಪಾರಿ ಬಶೀರ್ ಕುಟುಂಬಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ 10 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ದೀಪಕ್ ರಾವ್ ಹಾಗೂ ಬಶೀರ್ ನಿವಾಸಕ್ಕೆ ಮುಖ್ಯಮಂತ್ರಿ ಭೇಟಿ ನೀಡಿ ಸಾಂತ್ವನ ಹೇಳುವ ಸಾಧ್ಯತೆಯಿದೆ' ಎಂದು ಶಾಸಕ ಮೊಯಿದ್ದೀನ್ ಬಾಬಾ ತಿಳಿಸಿದ್ದಾರೆ.
ಬಶೀರ್ ಪುತ್ರ ವಿದೇಶದಿಂದ ಆಗಮಿಸಿದ ನಂತರ ರಾತ್ರಿ 7 ಗಂಟೆಗೆ ಅಂತ್ಯಕ್ರಿಯೆ ನಡೆಸಲಾಗುವುದು. ಪುತ್ರ ಬರುವುದು ತಡವಾದರೆ ಸಂಜೆ 4 ಗಂಟೆಗೆ ಅಂತ್ಯಕ್ರಿಯೆ ನಡೆಸಲಾಗುತ್ತದೆ. ಮೃತದೇಹದ ಮೆರವಣಿಗೆಗೆ ಅವಕಾಶ ಇರುವುದಿಲ್ಲ. ಮೃತದೇಹವನ್ನು ಮೊದಲು ಆಕಾಶಭವನದ ನಿವಾಸಕ್ಕೆ ಕೊಂಡೊಯ್ಯಲಾಗುವುದು. ನಂತರ ಕುಳೂರು ಜುಮ್ಮಾ ಮಸೀದಿಯಲ್ಲಿ ಅಂತಿಮ ದರ್ಶನವಾದದ ನಂತರ ಜುಮ್ಮಾ ಮಸೀದಿಯಲ್ಲಿ ದಫನ್ ಮಾಡಲಾಗುವುದು. ಶಾಂತಿಯುತವಾಗಿ ಅಂತ್ಯಕ್ರಿಯೆ ನಡೆಸಲು ಎಲ್ಲರಿಗೂ ಮನವಿ ಮಾಡಿದ್ದೇವೆ' ಎಂದು ಶಾಸಕ ಮೊಯಿದ್ದೀನ್ ಬಾಬಾ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.