ದೋಸ್ತಿ ಸರ್ಕಾರ ಉಳಿಸಿಕೊಳ್ಳಲು ಮಾಸ್ಟರ್ ಪ್ಲ್ಯಾನ್, 10 ಸಚಿವರ ರಾಜೀನಾಮೆ?

Published : Jul 06, 2019, 10:38 PM ISTUpdated : Jul 07, 2019, 07:26 PM IST
ದೋಸ್ತಿ ಸರ್ಕಾರ ಉಳಿಸಿಕೊಳ್ಳಲು ಮಾಸ್ಟರ್ ಪ್ಲ್ಯಾನ್, 10 ಸಚಿವರ ರಾಜೀನಾಮೆ?

ಸಾರಾಂಶ

ಸರಣಿ ರಾಜೀನಾಮೆಯಿಂದ ಕಂಗಾಲಾಗಿರುವ ದೋಸ್ತಿ ನಾಯಕರು ಸರಕಾರ ಉಳಿಸಿಕೊಳ್ಳಲು ಮಾಸ್ಟರ್ ಪ್ಲ್ಯಾನ್ ಒಂದನ್ನು ಮಾಡಿದ್ದಾರೆ.  ಅತೃಪ್ತ ಶಾಸಕರಿಗೆ ಸಚಿವ ಸ್ಥಾನ ನೀಡುವ ತೀರ್ಮಾನಕ್ಕೆ ಬಂದಿದ್ದಾರೆ ಎನ್ನಲಾಗಿದೆ.

ಬೆಂಗಳೂರು[ಜು. 07]  ರಾಜೀನಾಮೆ ನೀಡಿರುವ 14 ಶಾಸಕರಿಗೂ ದೋಸ್ತಿಗಳು ಸಚಿವ ಸ್ಥಾನದ ಆಫರ್ ನೀಡಿದ್ದಾರೆ ಎಂಬ ಸುದ್ದಿ ಬ್ರೇಕ್ ಆಗಿದೆ.  ಮೈತ್ರಿ ಸರ್ಕಾರ ಉಳಿಸಿಕೊಳ್ಳಲು ಕೊನೆಯ ಕಸರತ್ತು ಎಂಬಂತೆ ದೋಸ್ತಿ ನಾಯಕರು ಈ ತೀರ್ಮಾನಕ್ಕೆ ಬಂದಿದ್ದಾರೆ.

ಅತೃಪ್ತರ ರಾಜೀನಾಮೆ ಹಿನ್ನೆಲೆಯಲ್ಲಿ ದೋಸ್ತಿಗಳ ಮೆಗಾ ಪ್ಲಾನ್ ಮಾಡಿಕೊಂಡಿದ್ದಾರೆ. ಸರ್ಕಾರ ಉಳಿಸಿಕೊಳ್ಳಲು 10 ಸಚಿವರ ಪದತ್ಯಾಗಕ್ಕೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ಸಿನ 5 ಸಚಿವರು, ಜೆಡಿಎಸ್ ನ 5 ಜನ ಸಚಿವರು ಸ್ಥಾನ ತ್ಯಾಗಕ್ಕೆ ಸಿದ್ಧರಾಗಿದ್ದಾರೆ.

ದೋಸ್ತಿಗಳ ಅಚ್ಚರಿ ತೀರ್ಮಾನ: ಸಿದ್ದರಾಮಯ್ಯ ಮತ್ತೆ ಸಿಎಂ?

ಕಾಂಗ್ರೆಸ್ ನಿಂದ  ಸಚಿವರಾದ ಯು.ಟಿ. ಖಾದರ್, ಕೃಷ್ಣಭೈರೇಗೌಡ, ಕೆ.ಜೆ. ಜಾರ್ಜ್, ಆರ್.ವಿ.ದೇಶಪಾಂಡೆ, ಶಿವಶಂಕರರೆಡ್ಡಿ ರಾಜೀನಾಮೆ ನೀಡುವುದು ಪಕ್ಕಾ ಆಗಿದ್ದರೆ ಜೆಡಿಎಸ್ ನಿಂದ ಸಾ.ರಾ.ಮಹೇಶ್, ಪುಟ್ಟರಾಜು ಸ್ಥಾನ ತ್ಯಾಗ ಮಾಡಲಿದ್ದು ಇನ್ನು ಮೂವರು ಜೆಡಿಎಸ್ ಸಚಿವರ ಹೆಸರು ತಿಳಳಿದು ಬಂದಿಲ್ಲ.  ಸಿದ್ದರಾಮಯ್ಯ- ಸಿಎಂ ಕುಮಾರಸ್ವಾಮಿ ದೂರವಾಣಿಯಲ್ಲಿ ಸುದೀರ್ಘವಾಗಿ ಚರ್ಚಿಸಿ ತೀರ್ಮಾನ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಿತ್ತೂರು ಕರ್ನಾಟಕ ಹೆಸರಲ್ಲಿ ಪ್ರತ್ಯೇಕ ರಾಜ್ಯವಾಗಲಿ: ಶಾಸಕ ರಾಜು ಕಾಗೆ ಆಗ್ರಹ
ಸಿಎಂ ಸಿದ್ದರಾಮಯ್ಯ ಹೇಳಿಕೆಯೇ ನಮಗೆ ಅಂತಿಮ ಮಾರ್ಗದರ್ಶನ: ಸಚಿವ ದಿನೇಶ್ ಗುಂಡೂರಾವ್