ಬಿಎಂಟಿಸಿ ಬಿಡಲು 10000 ನೌಕರರ ಅರ್ಜಿ!

Published : Aug 24, 2017, 10:58 AM ISTUpdated : Apr 11, 2018, 12:58 PM IST
ಬಿಎಂಟಿಸಿ ಬಿಡಲು 10000 ನೌಕರರ ಅರ್ಜಿ!

ಸಾರಾಂಶ

ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಅಂತರ್ ನಿಗಮ ವರ್ಗಾವಣೆ ಪ್ರಕ್ರಿಯೆ ಅಂತಿಮ ಹಂತ ತಲುಪಿದ್ದು, ಇನ್ನೆರಡು ದಿನಗಳಲ್ಲಿ ವರ್ಗಾವಣೆಗೆ ಅರ್ಹ ನೌಕರರ ಪಟ್ಟಿ ಪ್ರಕಟವಾಗುವ ಸಾಧ್ಯತೆಯಿದೆ. ನಾಲ್ಕು ನಿಗಮಗಳ ವ್ಯವಸ್ಥಾಪಕ ನಿರ್ದೇಶ ಕರು ಬು‘ವಾರ ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿಯಲ್ಲಿ ಸಭೆ ನಡೆಸಿ ಅರ್ಹ ನೌಕರರ ಪಟ್ಟಿ ಪ್ರಕಟಿಸಲು ತೀರ್ಮಾನಿಸಿದ್ದಾರೆ ಎಂದು ತಿಳಿದು ಬಂದಿದೆ.

ಬೆಂಗಳೂರು(ಆ.24): ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಅಂತರ್ ನಿಗಮ ವರ್ಗಾವಣೆ ಪ್ರಕ್ರಿಯೆ ಅಂತಿಮ ಹಂತ ತಲುಪಿದ್ದು, ಇನ್ನೆರಡು ದಿನಗಳಲ್ಲಿ ವರ್ಗಾವಣೆಗೆ ಅರ್ಹ ನೌಕರರ ಪಟ್ಟಿ ಪ್ರಕಟವಾಗುವ ಸಾಧ್ಯತೆಯಿದೆ. ನಾಲ್ಕು ನಿಗಮಗಳ ವ್ಯವಸ್ಥಾಪಕ ನಿರ್ದೇಶ ಕರು ಬು‘ವಾರ ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿಯಲ್ಲಿ ಸಭೆ ನಡೆಸಿ ಅರ್ಹ ನೌಕರರ ಪಟ್ಟಿ ಪ್ರಕಟಿಸಲು ತೀರ್ಮಾನಿಸಿದ್ದಾರೆ ಎಂದು ತಿಳಿದು ಬಂದಿದೆ.

 ಬಿಎಂಟಿಸಿ, ಕೆಎಸ್‌'ಆರ್'ಟಿಸಿ ಸೇರಿ 4 ನಿಗಮಗಳಿಂದ 19414 ನೌಕರರು ವರ್ಗಾವಣೆಗೆ ಅರ್ಜಿ ಸಲ್ಲಿಸಿದ್ದರು. ಈ ಪೈಕಿ ಬಿಎಂಟಿಸಿ ಯಿಂದ 10192, ಕೆಸ್ ಆರ್‌ಟಿಸಿಯಿಂದ 5732,ಈಶಾನ್ಯ-1368, ವಾಯವ್ಯ ನಿಗಮದಿಂದ 1645 ನೌಕರರು ಅರ್ಜಿ ಸಲ್ಲಿಸಿದ್ದರು. ವರ್ಗಾವಣೆ ಪ್ರಕ್ರಿಯೆಯಲ್ಲಿ ಸೇವಾ ಹಿರಿತನಕ್ಕೆ ಮೊದಲ ಆದ್ಯತೆ ನೀಡಲಾಗಿದೆ.

4 ನಿಗಮಗಳಲ್ಲಿ ಹಾಲಿ ಖಾಲಿ ಇರುವ ಹುದ್ದೆಗಳು ಹಾಗೂ ವರ್ಗಾವಣೆಯಿಂದ ಖಾಲಿಯಾಗುವ ಹುದ್ದೆಗಳ ಆಧಾರದ ಮೇಲೆ ನೌಕರರನ್ನು ವರ್ಗಾವಣೆ ಮಾಡಲಾಗುತ್ತಿದೆ. ಹಾಗಾಗಿ ಅರ್ಜಿ ಸಲ್ಲಿಸಿದ ಎಲ್ಲ ನೌಕರರಿಗೂ ವರ್ಗಾವಣೆ ಭಾಗ್ಯ ಸಿಗುವುದಿಲ್ಲ. ಹೀಗಾಗಿ ಮುಂದೆ ಹುದ್ದೆಗಳು ಖಾಲಿಯಾದಾಗ ಸೇವಾ ಹಿರಿತನದ ಆಧಾರದಲ್ಲಿ ಉಳಿದವರನ್ನು ವರ್ಗಾವಣೆ ಮಾಡಬೇಕೆಂದು ನೌಕರರು ಆಗ್ರಹಿಸಿದ್ದಾರೆ.

ಸಾರಿಗೆ ಸಚಿವ ಆರ್.ರಾಮಲಿಂಗಾರೆಡ್ಡಿ ಅವರು ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಹಬ್ಬದೊಳಗೆ ವರ್ಗಾವಣೆಗೆ ಅರ್ಹರಾದ ನೌಕರರ ಪಟ್ಟಿ ಬಿಡುಗಡೆ ಮಾಡುವುದಾಗಿ ಹೇಳಿದ್ದರು. ಇದರ ಬೆನ್ನಲ್ಲೇ ನಾಲ್ಕು ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಸಭೆ ನಡೆಸಿ ಈ ಬಗ್ಗೆ ಚರ್ಚಿಸಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಜಗತ್ತಿನಲ್ಲಿ ಅತಿಹೆಚ್ಚು ಮದ್ಯಪಾನ ಮಾಡುವ ದೇಶ ಯಾವುದು? ಭಾರತಕ್ಕೆ ಎಷ್ಟನೇ ಸ್ಥಾನ ಗೊತ್ತಾ?
ಸಿಎಂ ಹೇಳಿದ ಮೇಲೂ ಅಧಿಕಾರ ಹಂಚಿಕೆ ಬಗ್ಗೆ ಚರ್ಚೆ ಸಲ್ಲ: ಸಚಿವ ಸತೀಶ್‌ ಜಾರಕಿಹೊಳಿ