
ಡಲ್ಲಾಸ್(ಆ.31) ಡಲ್ಲಾಸ್ ನಗರದಲ್ಲಿ ಇಂದಿನಿಂದ ಮೂರು ದಿನ ಕಾಲ ಅಕ್ಕ ಸಮ್ಮೇಳನ ನಡೆಯಲಿದ್ದು ವೇದಿಕೆ ಸಿದ್ಧವಾಗಿದೆ. ಅಮೆರಿಕ ಕನ್ನಡ ಕೂಟಗಳ ಆಗರ [ಅಕ್ಕ] ಸಮ್ಮೇಳನಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಚಾಲನೆ ನೀಡಲು ಆಹ್ವಾನ ನೀಡಲಾಗಿತ್ತು. ಆದರೆ ಕುಮಾರಸ್ವಾಮಿ ಸಮ್ಮೇಳನಕ್ಕೆ ತೆರಳಿಲ್ಲ. ಅಲ್ಲಿನ ಕನ್ನಡಿಗರೊಂದಿಗೆ ಕುಮಾರಸ್ವಾಮಿ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಲಿದ್ದಾರೆ.
ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಯುವ ಅಕ್ಕ ಸಮ್ಮೇಳನಕ್ಕೆ ಈ ಬಾರಿ ಹೊಸ ಧ್ಯೇಯ ವಾಕ್ಯವನ್ನು ಕೂಡ ರೂಪಿಸಲಾಗಿದ್ದು, "ಅಕ್ಕರೆಯ ಹತ್ತರ ಸಾರ್ಥಕ ಹೊತ್ತು" ಎಂಬ ಘೋಷ ವಾಕ್ಯದಡಿ ಕನ್ನಡ ಹಬ್ಬವನ್ನು ಆಚರಿಸಲಾಗುತ್ತಿದೆ. ಅಮೆರಿಕದ ಟೆಕ್ಸಾಸ್ನ ಡಲ್ಲಾಸ್ ನಗರದಲ್ಲಿ ಈ ಬಾರಿ 10ನೇ ವಿಶ್ವ ಅಕ್ಕ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ ನಾಳೆ ಅಧಿಕೃತವಾಗಿ ಸಿಗಲಿದೆ.
ಇಂದು ಅಂದರೆ ಶುಕ್ರವಾರ ಗಣ್ಯರು ಮತ್ತು ಅಮೆರಿಕದ ವಿವಿಧೆಡೆ ನೆಲೆಸಿರುವ ಕನ್ನಡಿಗರು ಆಗಮಿಸಿ ವಾಸ್ತವ್ಯ ಹೂಡಲಿದ್ದಾರೆ. ಡಲ್ಲಾಸ್ ನಗರದ ಶೆರಟನ್ ಕನ್ವೆನ್ ಷನ್ ಸೆಂಟರ್ ಸಿದ್ಧಗೊಂಡಿದ್ದು ಗಣ್ಯರ ಆಗಮನ ಎದುರು ನೋಡುತ್ತಿದೆ.
ರಾಜ್ಯದಿಂದ ಕಲಾವಿದರು ತೆರಳಿದ್ದು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಗಾಯಕ ವಿಜಯ್ ಪ್ರಕಾಶ್, ಶಮಿತಾ ಮಲ್ನಾಡ್ ಸೇರಿದಂತೆ ಅನೇಕರು ಗಾನ ಸುಧೆ ಹರಿಸಲಿದ್ದಾರೆ. ಅಕ್ಕ ಸಮ್ಮೇಳನದ ನಿರಂತರ ಅಪ್ ಡೇಟ್ ಗಾಗಿ ಸುವರ್ಣ ನ್ಯೂಸ್ .ಕಾಂ ನೋಡುತ್ತಾ ಇರಿ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ