
ಜಮ್ಮು : ದೇವಾಲಯಕ್ಕೆ ಭಕ್ತರನ್ನು ಕರೆದೊಯ್ಯುತ್ತಿದ್ದ ವಾಹನವೊಂದು ಸ್ಕಿಡ್ ಆಗಿ ನದಿಗೆ ಉರುಳಿದ ಪರಿಣಾಮ 11 ಮಂದಿ ಮೃತಪಟ್ಟ ಘಟನೆ ಜಮ್ಮು ಕಾಶ್ಮೀರದಲ್ಲಿ ನಡೆದಿದೆ.
ಜಮ್ಮು ಕಾಶ್ಮೀರದ ಕಸ್ತ್ವಾರ್ ಜಿಲ್ಲೆಯ ಮಠ ಮಚೈಲ್ ದೇವಾಲಯಕ್ಕೆ ತೆರಳುತ್ತಿದ್ದ ವೇಳೆ ವಾಹನ ಚೇನಾಬ್ ನದಿಗೆ ಉರುಳಿ ಬಿದ್ದು ಈ ಅನಾಹುತ ಸಂಭವಿಸಿದೆ.
ಕಿಸ್ತ್ವಾರ ಜಿಲ್ಲಾ ಕೇಂದ್ರದಿಂದ 28 ಕೀ.ಮಿ ದೂರದಲ್ಲಿ ಈ ದುರ್ಘಟನೆ ಸಂಭವಿಸಿದೆ ಎಂದು ಜಮ್ಮು ಕಾಶ್ಮೀರ ಡಿಜಿಪಿ ಎಸ್.ಪಿ ವೇದ್ ಹೇಳಿದ್ದಾರೆ.
ಅವಘಡ ಸಂಭವಿಸಿದ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿ 11 ಮೃತದೇಹಗಳನ್ನೂ ಕೂಡ ನದಿಯಿಂದ ಹೊರತೆಗೆಯಲಾಗಿದೆ. ಗಾಯಗೊಂಡ ಐದು ವರ್ಷದ ಮಗುವನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಳೆದ 24 ಗಂಟೆಗಳಲ್ಲಿ ಇದೇ ಪ್ರದೇಶದಲ್ಲಿ ಸಂಭವಿಸಿದ 2ನೇ ಭೀಕರ ಅಪಘಾತ ಇದಾಗಿದೆ ಎಂದು ಡಿಜಿಪಿ ಹೇಳಿದ್ದಾರೆ. ಸೋಮವಾರವೂ ಇಲ್ಲಿ ಅಪಘಾತ ಸಂಭವಿಸಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.