ಮಳೆಗೆ ಉತ್ತರ ಭಾರತ ತತ್ತರ; 11 ಮಂದಿ ಬಲಿ

Published : Sep 25, 2018, 07:40 AM IST
ಮಳೆಗೆ ಉತ್ತರ ಭಾರತ ತತ್ತರ; 11 ಮಂದಿ ಬಲಿ

ಸಾರಾಂಶ

ಜಮ್ಮು-ಕಾಶ್ಮೀರ, ಹರ್ಯಾಣ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ. ವರುಣನ ಅಬ್ಬರಕ್ಕೆ ಜಮ್ಮು-ಕಾಶ್ಮೀರ ಮತ್ತು ಹಿಮಾಚಲ ಪ್ರದೇಶಗಳ ಹಲವು ಭಾಗಗಳಲ್ಲಿ ಪ್ರವಾಹ ಮತ್ತು ಭೂಕುಸಿತವಾಗಿದೆ. ಈ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. 

ನವದೆಹಲಿ[ಸೆ.25]: ಜಮ್ಮು-ಕಾಶ್ಮೀರ, ಉತ್ತರಾಖಂಡ್‌, ಹರ್ಯಾಣ ಮತ್ತು ಹಿಮಾಚಲ ಪ್ರದೇಶ ಸೇರಿದಂತೆ ಉತ್ತರ ಭಾರತದ ರಾಜ್ಯಗಳು ಧಾರಾಕಾರ ಮಳೆಯಿಂದ ಅಕ್ಷರಶಃ ತತ್ತರಿಸಿವೆ.

ಜಮ್ಮು-ಕಾಶ್ಮೀರ, ಹರ್ಯಾಣ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ. ವರುಣನ ಅಬ್ಬರಕ್ಕೆ ಜಮ್ಮು-ಕಾಶ್ಮೀರ ಮತ್ತು ಹಿಮಾಚಲ ಪ್ರದೇಶಗಳ ಹಲವು ಭಾಗಗಳಲ್ಲಿ ಪ್ರವಾಹ ಮತ್ತು ಭೂಕುಸಿತವಾಗಿದೆ. ಈ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. 

ಮಳೆಯಿಂದಾಗಿ ಗುಡ್ಡ ಕುಸಿದ ಕಾರಣ ಬೃಹತ್‌ ಬಂಡೆಗಳು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು, ಬದ್ರಿನಾಥ, ಕೇದರನಾಥ ಮತ್ತು ಯಮುನೋತ್ರಿ ಯಾತ್ರೆಗೆ ತೊಡಕಾಗಿದೆ. ಹರ್ಯಾಣ ಮತ್ತು ಪಂಜಾಬ್‌ನಲ್ಲಿ ಸೋಮವಾರವೂ ಗುಡುಗು-ಸಿಡಿಲು ಸಹಿತವಾದ ಮಳೆ ಮುಂದುವರಿದಿದ್ದು, ಈ ಎರಡೂ ರಾಜ್ಯಗಳಲ್ಲಿ ಖಾರೀಫ್‌ ಬೆಳೆಗಳು ನಾಶವಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಇನ್ನು ಕಳೆದ 48 ಗಂಟೆಯಲ್ಲಿ ಹಿಮಾಚಲ ಪ್ರದೇಶದ ಪ್ರವಾಹದಲ್ಲಿ ಸಿಲುಕಿದ್ದ 21 ಮಂದಿಯನ್ನು ಭಾರತೀಯ ವಾಯು ಪಡೆ ತಂಡ ರಕ್ಷಣೆ ಮಾಡಿದೆ.

PREV
click me!

Recommended Stories

ಥೈಲ್ಯಾಂಡ್‌ನಿಂದ ಚೀಲದಲ್ಲಿ 48 ವಿಷಕಾರಿ ಹಾವನ್ನು ತಂದ ಪ್ರಯಾಣಿಕ; ಇಲ್ಲಿವೆ ಫೋಟೋಗಳು
Bride Calls Off Wedding: ಮದುವೆ ಮಂಟಪದಲ್ಲೇ ವರನ ಅಸಲಿಯತ್ತು ಕಂಡುಹಿಡಿದ ವಧು! ಮದುವೆ ನಿಂತೋಯ್ತು!