ಚುನಾವಣೆ ವೇಳೆ ಆಸ್ತಿ ವಿವರ ಸಲ್ಲಿಸದ 11 ಮಂದಿ ವಜಾ

Published : Jun 05, 2018, 09:22 AM IST
ಚುನಾವಣೆ ವೇಳೆ ಆಸ್ತಿ ವಿವರ ಸಲ್ಲಿಸದ 11 ಮಂದಿ ವಜಾ

ಸಾರಾಂಶ

ಆಸ್ತಿ ವಿವರ ಸಲ್ಲಿಸದ ರಾಜ್ಯದ 9 ಜಿಲ್ಲೆಗಳ 11 ಗ್ರಾಮ ಪಂಚಾಯಿತಿ ಸದಸ್ಯರ ಸದಸ್ಯತ್ವವನ್ನು ರಾಜ್ಯ ಚುನಾವಣಾ ಆಯೋಗ ರದ್ದುಗೊಳಿಸಿದೆ.   

ಮಂಡ್ಯ: ಆಸ್ತಿ ವಿವರ ಸಲ್ಲಿಸದ ರಾಜ್ಯದ 9 ಜಿಲ್ಲೆಗಳ 11 ಗ್ರಾಮ ಪಂಚಾಯಿತಿ ಸದಸ್ಯರ ಸದಸ್ಯತ್ವವನ್ನು ರಾಜ್ಯ ಚುನಾವಣಾ ಆಯೋಗ ರದ್ದುಗೊಳಿಸಿದೆ. 

2015-16 ಮತ್ತು 2016-17ನೇ ಸಾಲಿನಲ್ಲಿ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸುವಾಗ ಹಾಗೂ ಚುನಾಯಿತರಾದ ನಂತರವೂ ಈ 11 ಮಂದಿ ಸದಸ್ಯರು ಇದುವರೆಗೂ ತಮ್ಮ ಆಸ್ತಿ ವಿವರ ಸಲ್ಲಿಸದ ಕಾರಣ ಚುನಾವಣಾ ಆಯುಕ್ತರು ಈ ಕ್ರಮ ಕೈಗೊಂಡಿದ್ದಾರೆ. 

ಮಂಡ್ಯ ಜಿಲ್ಲೆಯ 1, ಹಾಸನದ 2, ಕೊಡಗಿನ 2, ಬೆಂಗಳೂರು ನಗರದ 1, ತುಮಕೂರಿನ 1, ದಾವಣಗೆರೆಯ 1, ಧಾರವಾಡದ 1, ಬೆಳಗಾವಿಯ 1 ಹಾಗೂ ಕಲಬುರಗಿ ಜಿಲ್ಲೆಯ ಒಬ್ಬ ಗ್ರಾಮ ಪಂಚಾಯಿತಿ ಸದಸ್ಯರು ತಮ್ಮ ಸದಸ್ಯತ್ವ ಕಳೆದುಕೊಂಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯುವತಿಗೆ ಸೋಷಿಯಲ್ ಮೀಡಿಯಾದಲ್ಲಿ ವಿಶ್‌ ಮಾಡಿದ್ದಕ್ಕೆ ಯುವಕನ ಹತ್ಯೆ, ಬೆಚ್ಚಿಬಿದ್ದ ಚಿಕ್ಕಮಗಳೂರು!
2700 ವರ್ಷಗಳ ಹಿಂದೆ ಭಾರತಕ್ಕೆ ಬಂದಿದ್ದ ಮಣಿಪುರ ಮಿಜೋರಾಂನಲ್ಲಿ ವಾಸಿಸುವ ಇಸ್ರೇಲಿಗರು ಮತ್ತೆ ತವರಿಗೆ