
ಶ್ರೀನಗರ(ಜೂ.28) ಬಾಲಕನಿಗೆ ತಾನು ಏನು ಮಾಡುತ್ತಿದ್ದೇನೆ ಎಂದು ಗೊತ್ತಿರಲಿಲ್ಲ. ಆಕಸ್ಮಿಕವಾಗಿ ರಾಷ್ಟ್ರದ ಗಡಿಯೊಂದನ್ನು ದಾಟಿದ್ದ. ಆದರೆ ಹೊಸ ಬಟ್ಟೆ ಮತ್ತು ಸಿಹಿಯೊಂದಿಗೆ ಮನೆಗೆ ಹಿಂದಿರುಗಿದ್ದ.
ಪಾಕ್ ಆಕ್ರಮಿತ ಕಾಶ್ಮೀರದೊಳಕ್ಕೆ ಆಕಸ್ಮಿಕವಾಗಿ ಒಳಬಂದಿದ್ದ 11 ವರ್ಷದ ಬಾಲಕ ಬಾಲಕನನ್ನು ಸಿಹಿಯೊಂದಿಗೆ ಪಾಕ್ ಗೆ ವಾಪಸ್ ಕಳುಹಿಸಿಕೊಡಲಾಗಿದೆ. ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ಭಾಗದಲ್ಲಿ ಭಾರತ ಪ್ರವೇಶ ಮಾಡಿದ್ದ ಮಹಮದ್ ಅಬ್ದುಲ್ಲಾ ಜೂನ್24 ರಂದು ಭಾರತೀಯ ಸೇನೆಗೆ ಸಿಕ್ಕಿದ್ದ. ಬಾಲಕನ ವಿಳಾಸವನ್ನು ತಿಳಿದ ಅಧಿಕಾರಿಗಳು ಆತನನ್ನು ಸುರಕ್ಷಿತವಾಗಿ ಕಳುಹಿಸಿಕೊಟ್ಟಿದ್ದಾರೆ
ಮಾನವೀಯತೆ ಆಧಾರದಲ್ಲಿ ಬಾಲಕನನ್ನು ಬಿಟ್ಟು ಕಳುಹಿಸಲಾಗಿದೆ. ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧ ಸುಧಾರಣೆಗೂ ಇದು ಕಾರಣವಾದರೆ ಒಳ್ಳೆಯದು ಎಂದು ಸೈನ್ಯದ ಅಧಿಕಾರಿಯೊಬ್ಬರು ಹೇಳಿದ್ದಾರೆ. ಭಾರತದಿಂದ ತಪ್ಪಿಸಕೊಂಡು ಪಾಕ್ ಸೇರಿದ್ದ ಗೀತಾ ಎಂಬ ಯುವತಿಯನ್ನು ಕಳೆದ ಅಕ್ಟೋಬರ್ ನಲ್ಲಿ ಭಾರತ ಬರಮಾಡಿಕೊಂಡಿದ್ದ ಪ್ರಕರಣವೂ ನಡೆದಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.