
ಬೆಂಗಳೂರು(ಡಿ.17): ರಾಜ್ಯದಲ್ಲಿ ಕೊರೋನಾದಿಂದಾಗಿ ಮೃತರಾಗುತ್ತಿರುವವ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದ ಇಳಿಕೆ ದಾಖಲಾಗುತ್ತಿದೆ. ಕಳೆದ ನಾಲ್ಕು ದಿನದಲ್ಲಿ ಎರಡನೇ ಬಾರಿಗೆ ಸಾವಿನ ಸಂಖ್ಯೆ ಒಂದಂಕಿಗೆ ಇಳಿದಿದೆ. ಬುಧವಾರ ಆರು ಜನರು ಮೃತಪಟ್ಟಿದ್ದು, (ಭಾನುವಾರ ಐದು ಮಂದಿ) 1,240 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. 1,403 ಜನರು ಗುಣಮುಖರಾಗಿದ್ದಾರೆ.
ಪ್ರಸ್ತುತ 15,476 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 248 ಮಂದಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ ಒಟ್ಟು 9.04 ಲಕ್ಷ ಮಂದಿಯನ್ನು ಸೋಂಕು ಬಾಧಿಸಿದ್ದು, ಗುಣಮುಖರಾದವರ ಸಂಖ್ಯೆ 8.77 ಲಕ್ಷಕ್ಕೆ ಏರಿದೆ. ಒಟ್ಟು 11,971 ಮಂದಿ ಮೃತರಾಗಿದ್ದಾರೆ. ಸದ್ಯ ರಾಜ್ಯದಲ್ಲಿ ಕೊರೋನಾ ಸಾವಿನ ದರ ಶೇ. 1.33ರಷ್ಟಿದೆ.
ರಾಜ್ಯದಲ್ಲಿ ಮತ್ತೆ ಮೂರಂಕಿ ದಾಟಿದ ಕೊರೋನಾ ಸೊಂಕಿತರ ಸಂಖ್ಯೆ: ಇರಲಿ ಎಚ್ಚರಿಕೆ
ನಾಲ್ಕು ದಿನಗಳ ಬಳಿಕ ಕೊರೋನಾ ಪರೀಕ್ಷೆಯ ಪ್ರಮಾಣ ಲಕ್ಷ (1.01 ಲಕ್ಷ) ದಾಟಿದೆ. ಈವರೆಗೆ ಒಟ್ಟು 1.26 ಕೋಟಿ ಜನರಿಗೆ ಪರೀಕ್ಷೆ ನಡೆಸಲಾಗಿದೆ. ಬುಧವಾರ ಬೆಂಗಳೂರು ನಗರ ಜಿಲ್ಲೆಯಲ್ಲಿ ನಾಲ್ಕು, ಬಳ್ಳಾರಿ, ಚಿಕ್ಕಮಗಳೂರು ಜಿಲ್ಲೆಯಲ್ಲಿ ತಲಾ ಒಬ್ಬರು ಮರಣವನ್ನಪ್ಪಿದ್ದಾರೆ.
ಬೆಂಗಳೂರು ನಗರ ಜಿಲ್ಲೆಯಲ್ಲಿ 676, ಬಾಗಲಕೋಟೆ, ಹಾವೇರಿ, ಯಾದಗಿರಿ ಮತ್ತು ಬೆಳಗಾವಿ ತಲಾ 5, ಬಳ್ಳಾರಿ ಮತ್ತು ಚಾಮರಾಜನಗರ ತಲಾ 17, ಬೆಂಗಳೂರು ಗ್ರಾಮಾಂತರ 28, ಬೀದರ್ 10, ಚಿಕ್ಕಬಳ್ಳಾಪುರ 14, ಚಿಕ್ಕಮಗಳೂರು 8, ಚಿತ್ರದುರ್ಗ 51, ದಕ್ಷಿಣ ಕನ್ನಡ 23, ದಾವಣಗೆರೆ 26, ಧಾರವಾಡ 15, ಗದಗ 7, ಹಾಸನ 34, ಕಲಬುರಗಿ 30, ಕೊಡಗು 46, ಕೋಲಾರ 16, ಕೊಪ್ಪಳ 8, ಮಂಡ್ಯ 32, ಮೈಸೂರು 47, ರಾಯಚೂರು 11, ರಾಮನಗರ 4, ಶಿವಮೊಗ್ಗ 13, ತುಮಕೂರು 57, ಉಡುಪಿ 16, ಉತ್ತರ ಕನ್ನಡ 8 ಮತ್ತು ವಿಜಯಪುರ ಜಿಲ್ಲೆಯಲ್ಲಿ ಆರು ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.