ಪರಪ್ಪನ ಅಗ್ರಹಾರದತ್ತ ಹೊರಟ ರವಿ ಬೆಳಗೆರೆ: 14 ದಿನಗಳ ನ್ಯಾಯಾಂಗ ಬಂಧನ

Published : Dec 11, 2017, 12:50 PM ISTUpdated : Apr 11, 2018, 12:56 PM IST
ಪರಪ್ಪನ ಅಗ್ರಹಾರದತ್ತ ಹೊರಟ ರವಿ ಬೆಳಗೆರೆ: 14 ದಿನಗಳ ನ್ಯಾಯಾಂಗ ಬಂಧನ

ಸಾರಾಂಶ

ಸುನೀಲ್ ಹೆಗ್ಗರವಳ್ಳಿ ಕೊಲೆಗೆ ಸುಪಾರಿ ಕೊಟ್ಟ ಆರೋಪ ಎದುರಿಸುತ್ತಿರುವ ರವಿ ಬೆಳಗೆರೆಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಡಿ.23 ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಬೆಂಗಳೂರು (ಡಿ.11): ಸುನೀಲ್ ಹೆಗ್ಗರವಳ್ಳಿ ಕೊಲೆಗೆ ಸುಪಾರಿ ಕೊಟ್ಟ ಆರೋಪ ಎದುರಿಸುತ್ತಿರುವ ರವಿ ಬೆಳಗೆರೆಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಡಿ.23 ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ರವಿ ಬೆಳಗೆರೆಗೆ 1 ನೇ ಎಸಿಎಂಎ ಕೋರ್ಟ್ ನ್ಯಾಯಾಂಗ ಬಂಧನ ಆದೇಶ  ನೀಡಿದೆ. ಜೈಲಿನಲ್ಲಿ ವೈದ್ಯಕೀಯ ಸೌಲಭ್ಯ ನೀಡುವಂತೆ ರವಿ ಬೆಳಗೆರೆ ಪರ ವಕೀಲ ದಿವಾಕರ್ ಕೋರ್ಟ್'ಗೆ ಮನವಿ ಮಾಡಿಕೊಂಡಿದ್ದಾರೆ.  

ನ್ಯಾಯಾಲಯದ ಬಗ್ಗೆ, ತನಿಖೆ ಬಗ್ಗೆ ಬಹಳ ಗೌರವವಿದೆ. ಇಂಥ ತಪ್ಪಿಗೆ ಅಷ್ಟು ಬೇಗ ಜಾಮೀನು ಸಿಗುವುದಿಲ್ಲ ಎಂಬ ನಂಬಿಕೆಯಿದೆ.  ತನಿಖೆ ನಡೆಯಲಿ. ಸೂಕ್ತ ನ್ಯಾಯ ಸಿಗಲಿ ಎಂಬುದೇ ನನ್ನ ಆಶಯ. ನಮ್ಮ ಬೆಂಗಳೂರು ಪೋಲೀಸರು ಪ್ರಾಮಾಣಿಕವಾಗಿ ತನಿಖೆ ನಡೆಸಿದ್ದಾರೆ.  ಈ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ಆಗೇ ಆಗುತ್ತದೆ ಎಂದು ಸುನೀಲ್ ಹೆಗ್ಗರವಳ್ಳಿ ಸುವರ್ಣ ನ್ಯೂಸ್'ಗೆ ಪ್ರತಿಕ್ರಿಯೆ  ನೀಡಿದ್ದಾರೆ.

ಇದೀಗ ರವಿ ಬೆಳಗೆರೆ ಪರಪ್ಪನ ಅಗ್ರಹಾರದತ್ತ ಹೊರಟಿದ್ದಾರೆ. 1 ನೇ ಎಸಿಎಂಎಂ ಕೋರ್ಟ್'ನಿಂದ ಪರಪ್ಪನ ಜೈಲಿಗೆ ಕಳುಹಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಡ್ನಿ ಶೂಟಿಂಗ್ ದಾಳಿಗೆ ಪಾಕಿಸ್ತಾನ ಸಂಪರ್ಕ: ಆರೋಪಿ ಲಾಹೋರ್ ಮೂಲದ ನವೀದ್ ಅಕ್ರಮ್; ಫೋಟೋ ವೈರಲ್!
ತುರುವೇಕೆರೆ: ದೇವರ ಮೇಲೆ ಹಾಕಿದ್ದ 500 ಗ್ರಾಂ ಸರ, 10 ಸಾವಿರ ರೂ. ನಗದು ಕದ್ದ ಕಳ್ಳರು!