
ಬರ್ಮೇರ್ [ರಾಜಸ್ಥಾನ], [ಜೂ.23]: ಬಿರುಗಾಳಿ ಸಹಿತ ಭಾರಿ ಮಳೆಯಿಂದಾಗಿ ಪೆಂಡಾಲ್(ಟೆಂಟ್) ಕುಸಿದು ಸುಮಾರು 14 ಜನರು ಮೃತಪಟ್ಟು 50ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ರಾಜಸ್ಥಾನದ ಬರ್ಮೇರ್ ನಲ್ಲಿ ಘಟನೆ ನಡೆದಿದೆ.
ಜೈಪುರದಿಂದ 500 ಕಿಮೀ ದೂರವಿರುವ ಜಾಸೊಲ್ ಪ್ರದೇಶದಲ್ಲಿ ಇಂದು [ಭಾನುವಾರ] ಸಂಜೆ 4.30ರ ಸುಮಾರಿಗೆ ರಾಮ ಕಥೆಯನ್ನು ಏರ್ಪಡಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಸ್ಥಳೀಯರೆಲ್ಲರೂ ರಾಮಕಥೆಯನ್ನು ಕೇಳಲು ಅಲ್ಲಿ ನೆರೆದಿದ್ದರು.
ಈ ವೇಳೆ ಶಾಮಿಯಾನ ಅಡಿಯಲ್ಲಿ ಕುಳಿತಿದ್ದವರ ಮೇಲೆ ಬಿದ್ದಿದ್ದರಿಂದಾಗಿ ಸಾವು, ನೋವು ಸಂಭವಿಸಿದೆ ಎಂದು ಪೊಲೀಸ್ ಹೆಚ್ಚುವರಿ ಸೂಪರಿಂಟೆಂಡೆಂಟ್ ಕೀನ್ ಸಿಂಗ್ ತಿಳಿಸಿದ್ದಾರೆ.
ಮಳೆಯಿಂದಾಗಿ ಎಲೆಕ್ಟ್ರಿಕ್ ಶಾಕ್ ಉಂಟಾಗಿ ಸಾವು ಸಂಭವಿಸಿದೆ ಎಂದು ಕೆಲವರು ಹೇಳಿದ್ದಾರೆ. ಘಟನೆ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಟ್ವೀಟ್ ಮಾಡಿದ್ದು ಘಟನೆಯಲ್ಲಿ ಮಡಿದವರಿಗೆ ಸಂತಾಪ ಸೂಚಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.