
ಬೆಂಗಳೂರು(ಜ.23): ಕಳೆದ ಕೆಲ ದಿನಗಳಿಂದ ಬೆಳಗಾಂ ಮತ್ತು ಬೆಂಗಳೂರಿನ್ಲಲಿ ರಾಜಕಾರಣಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದ ೈಟಿ ಅಧಿಕಾರಿಗಳು ನೂರಾರು ಕೋಟಿ ರೂಪಾಯಿ ಹಣ ಮತ್ತು ಕೆಜಿಗಟ್ಟಲೆ ಬಂಗಾರವನ್ನ ವಶಪಡಿಸಿಕೊಂಡಿರುವ ಮಾಹಿತಿ ಇದೀಗ ಬೆಳಕಿಗೆ ಬಂದಿದೆ. ಪ್ರಮುಖವಾಗಿ ಸಣ್ಣ ಕೈಗಾರಿಕಾ ಸಚಿವ ರಮೇಶ್ ಜಾರಕಿಹೊಳಿ ಮನೆಯಲ್ಲಿ ಭಾರೀ ಸಂಪತ್ತು ವಶಪಡಿಸಿಕೊಳ್ಳಲಾಗಿದೆ.
ಸಚಿವ ರಮೇಶ್ ಜಾರಕಿಹೊಳಿ ಮನೆಯಲ್ಲಿ ದಾಖಲೆ ಇಲ್ಲದ 150 ಕೋಟಿ ರೂ. ಹಣ ಮತ್ತು 12 ಕೆಜಿ ಬಂಗಾರವನ್ನ ವಶಪಡಿಸಿಕೊಳ್ಳಲಾಗಿದೆ ಎಂದು ಐಟಿ ಅಧಿಕಾರಿಗಳು ತಿಳಿಸಿದ್ಧಾರೆ. ವಶಪಡಿಸಿಕೊಂಡಿರುವ ಈ ಸಂಪತ್ತಿಗೆ ಸಂಬಂಧಿಸಿದಂತೆ ಸೂಕ್ತ ದಾಖಲೆ ಒದಗಿಸುವಂತೆ ಈಗಾಗಲೇ ಸಚಿವರಿಗೆ ನೋಟಿಸ್ ಸಹ ನೀಡಲಾಗಿದೆ. ಕಳೆದ ಶುಕ್ರವಾರದಿಂದ ರಮೇಶ್ ಮನೆಯಲ್ಲಿ ಶೋಧ ನಡೆದಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.