ಮೈಸೂರು: 150 ವರ್ಷಗಳ ಹಿಂದಿನ ಬೃಹತ್ ನಂದಿ ವಿಗ್ರಹ ಪತ್ತೆ, ಗ್ರಾಮಸ್ಥರ ಮಾದರಿ ಕೆಲಸ

Published : Jul 14, 2019, 10:45 PM ISTUpdated : Jul 14, 2019, 10:53 PM IST
ಮೈಸೂರು: 150 ವರ್ಷಗಳ ಹಿಂದಿನ ಬೃಹತ್ ನಂದಿ ವಿಗ್ರಹ ಪತ್ತೆ,  ಗ್ರಾಮಸ್ಥರ ಮಾದರಿ ಕೆಲಸ

ಸಾರಾಂಶ

ಉತ್ಖನನ ನಡೆದಾಗ, ಅಥವಾ ಜಮೀನು ಉಳುಮೆ ಮಾಡುವಾಗ ಐತಿಹಾಸಿಕ ಮೌಲ್ಯಗಳಿರುವ ವಿಗ್ರಹ ನಾಣ್ಯಗಳು ಪತ್ತೆಯಾಗುವ ಸುದ್ದಿ ಕೇಳುತ್ತಿರುತ್ತೇವೆ. ಅದೆ ರೀತಿಯ ಒಂದು ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.

ಮೈಸೂರು[ಜು.14] ಮೈಸೂರು ಜಿಲ್ಲೆಯಲ್ಲಿ ಪೌರಾಣಿಕ ಹಿನ್ನೆಲೆಯುಳ್ಳ ಬೃಹತ್ ನಂದಿ‌ ವಿಗ್ರಹಗಳು ಪತ್ತೆಯಾಗಿವೆ. ಮೈಸೂರು ಜಿಲ್ಲೆಯ ಅರಸನಕೆರೆ ಗ್ರಾಮದಲ್ಲಿ ಬೃಹತ್ ನಂದಿ ವಿಗ್ರಹಗಳು ಸಿಕ್ಕಿವೆ.  ಗ್ರಾಮದ ಜಮೀನಿನಲ್ಲಿ ಸುಮಾರು 12 ಅಡಿ ಮೀರಿದ ಎರಡು ನಂದಿ ವಿಗ್ರಹಗಳು ಪತ್ತೆಯಾಗಿವೆ.

15 ಅಡಿ ಮಣ್ಣಿನ ಆಳದಲ್ಲಿ ಮುಚ್ಚಿಹೋಗಿದ್ದ ಎರಡು ಬೃಹತ್ ನಂದಿ ವಿಗ್ರಹಗಳು ಸಿಕ್ಕಿವೆ. ಸುಮಾರು ನೂರೈವತ್ತು ವರ್ಷಗಳ ಐತಿಹಾಸಿಕ ಹಿನ್ನೆಲೆಯುಳ್ಳ ಅತ್ಯಂತ ದೊಡ್ಡದಾದ ನಂದಿ ವಿಗ್ರಹಗಳು ಇವು ಎಂದು ಹೇಳಲಾಗಿದೆ.

ಸುಮಾರು ನಲವತ್ತೈದು ವರ್ಷಗಳ ಹಿಂದಿಯೇ ಈ ವಿಗ್ರಹಗಳ ಕುರುಹು ಪತ್ತೆಯಾಗಿತ್ತು. ನಂದಿಯ ತಲೆ ಭಾಗ ಮಾತ್ರ ಪತ್ತೆಯಾಗಿತ್ತು. ಸದ್ಯ ಸಂಪೂರ್ಣ ವಿಗ್ರಹಗಳ ಉತ್ಖನನ ಕಾರ್ಯ ನಡೆದಿದೆ. ಗ್ರಾಮಸ್ಥರು ಸ್ವಯಂ ಪ್ರೇರಿತವಾಗಿ ಮಣ್ಣಿನಲ್ಲಿ ಹುದುಗಿದ್ದ ನಂದಿ ವಿಗ್ರಹಗಳನ್ನು ಮೇಲಕ್ಕೆ ತಂದಿದ್ದಾರೆ.

ಈ ಮೋಸ್ಟ್ ಹಾಂಟೆಡ್ ದ್ವೀಪಕ್ಕೆ ಹೋದ್ರೆ ಕಥೆ ಅಷ್ಟೇ..

ವಿಗ್ರಹಕ್ಕೆ ನಲವತ್ತು  ವರ್ಷದಿಂದ ಗ್ರಾಮಸ್ಥರು ಪೂಜೆ ಸಲ್ಲಿಸುತ್ತಾ ಬಂದಿದ್ದರು. ಅಲ್ಲದೇ ಇದರ ಜತೆಗೆ ಹದಿನೈದು ಬೇರೆ ಬೇರೆ ವಿಗ್ರಹಗಳು ಪತ್ತೆಯಾಗಿದ್ದು ಇತಿಹಾಸದ ಕತೆ ಹೇಳುತ್ತಿವೆ. 

ಇತಿಹಾಸದ ಮೇಲೊಂದು ನೋಟ:  ಈ ಜಾಗಕ್ಕೆ ಮೈಸೂರು ಸಂಸ್ಥಾನದ ಮಹಾರಾಜ ಚಾಮರಾಜ ಒಡೆಯರ್ ಭೇಟಿ ನೀಡಿದ್ದರು. ಹಿಂದೆ ಚಾಮರಾಜ ಒಡೆಯರ್ ಸ್ವತಃ ವಿಗ್ರಹಗಳ ಮೇಲೆತ್ತಲು ಪ್ರಯತ್ನಿಸಿದ್ದ ಬಗ್ಗೆಯೂ ದಾಖಲೆಗಳಿವೆ. ಹಳ್ಳದಲ್ಲಿದ್ದ ವಿಗ್ರಹಕ್ಕೆ ಪೂಜೆ ಸಲ್ಲಿಸಿ ಹೋಗುತ್ತಿದ್ದರು. ಈಗ ಗ್ರಾಮಸ್ಥರೇ ಮುಂದಾಗಿ ವಿಗ್ರಹ ಮೇಲೆತ್ತುವ ಮಾದರಿ ಕೆಲಸ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Davanagere South by election results 2026: ಇಂದು ಮತ ಎಣಿಕೆ ಹಿನ್ನೆಲೆ 'ಶುಷ್ಕ ದಿವಸ' ಘೋಷಣೆ, ಯಾವಕ್ಕೆಲ್ಲ ನಿರ್ಬಂಧ?
ದಕ್ಷಿಣಕ್ಕೆ ಸಮರ್ಥ ಆಯ್ಕೆಯೋ?, ಶ್ರೀನಿವಾಸ ಕಲ್ಯಾಣವೋ?! SDPI ಅಭ್ಯರ್ಥಿ ಅಫ್ಸರ್‌ ಸ್ಪರ್ಧೆಯಿಂದ 'ಕೊಡ್ಲಿ ಪೆಟ್ಟು' ಯಾರಿಗೆ?