ಜಮ್ಮುವಿನಲ್ಲಿ ಮತ್ತೊಂದು ಅವಘಡ: 16 ಅಮರ್'ನಾಥ್ ಯಾತ್ರಾರ್ಥಿಗಳ ಸಾವು

Published : Jul 16, 2017, 06:09 PM ISTUpdated : Apr 11, 2018, 01:11 PM IST
ಜಮ್ಮುವಿನಲ್ಲಿ ಮತ್ತೊಂದು ಅವಘಡ: 16 ಅಮರ್'ನಾಥ್ ಯಾತ್ರಾರ್ಥಿಗಳ ಸಾವು

ಸಾರಾಂಶ

ರಾಮ್'ಬನ್ ಜಿಲ್ಲೆಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ನಾಚ್'ಲಾನ ಪ್ರದೇಶದ ಕಣಿವೆಗೆ ಉರುಳಿದೆ. ಸ್ಥಳದಲ್ಲೇ 16 ಮಂದಿ ಮೃತಪಟ್ಟು, 19 ಗಂಭಿರ ಹಾಗೂ 8 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ

ಜಮ್ಮು(ಜು.16): ಜಮ್ಮು ಮತ್ತು ಶ್ರೀನಗರದ ರಾಮ್'ಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಯಾತ್ರಾರ್ಥಿ'ಗಳು ಪ್ರಯಾಣಿಸುತ್ತಿದ್ದ ಬಸ್ ಕಂದಕಕ್ಕೆ ಬಿದ್ದ ಪರಿಣಾಮ 16 ಮಂದಿ ಮೃತಪಟ್ಟು 30 ಮಂದಿ ಗಾಯಗೊಂಡಿದ್ದಾರೆ.

ಇಂದು ಬೆಳಿಗ್ಗೆ ಯಾತ್ರಾರ್ಥಿಗಳಿಧ್ದ ಬಸ್ ರಾಮ್'ಬನ್ ಜಿಲ್ಲೆಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ನಾಚ್'ಲಾನ ಪ್ರದೇಶದ ಕಣಿವೆಗೆ ಉರುಳಿದೆ. ಸ್ಥಳದಲ್ಲೇ 16 ಮಂದಿ ಮೃತಪಟ್ಟು, 19 ಗಂಭಿರ ಹಾಗೂ 8 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿಸಲಾಗಿದೆ ಎಂದು  ರಾಮ್'ಬನ್ ಜಿಲ್ಲೆಯ ಹಿರಿಯ ವರಿಷ್ಠಾಧಿಕಾರಿ ಮೋಹನ್ ಲಾಲ್ ತಿಳಿಸಿದ್ದಾರೆ   

ಅಮರನಾಥ ಯಾತ್ರಿಕರಿಗೆ ಆದಂತಹ ದುರ್ಘಟನೆ ಇದು ಎರಡನೆಯದಾಗಿದ್ದು ಜುಲೈ 10ರಂದು ಗುಜರಾತ್'ನಿಂದ ಜಮ್ಮುವಿಗೆ ತೆರಳುತ್ತಿದ್ದ ಯಾತ್ರಾರ್ಥಿಗಳಿದ್ದ ಬಸ್'ಗೆ ಉಗ್ರರು ದಾಳಿ ನಡೆಸಿದ ಪರಿಣಾಮ 7 ಮಂದಿ ಮೃತಪಟ್ಟಿದ್ದರು. ಈ ವರ್ಷ 1.2 ಲಕ್ಷ ಮಂದಿ ಯಾತ್ರೆಗೆ ತೆರಳಲು ನೋಂದಾಯಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನೇತ್ರದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಲಲಿತಮ್ಮ
ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?