
ಬೆಂಗಳೂರು(ಮಾ.13): ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಸೇರಿದಂತೆ ಕಾಂಗ್ರೆಸ್ನ ಬಹುತೇಕ ಎಲ್ಲಾ ಶಾಸಕರು, ಕಳೆದ ಬಾರಿಯ ಪರಾಜಿತ ಅಭ್ಯರ್ಥಿಗಳು, ಹಿರಿಯ ಮುಖಂಡರು ಹಾಗೂ ಹಲವು ಮುಖಂಡರ ಪುತ್ರರು ಸೇರಿದಂತೆ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಟಿಕೆಟ್ಗಾಗಿ 1600 ಮಂದಿ ಅರ್ಜಿ ಸಲ್ಲಿಸಿದ್ದಾರೆ.
ಟಿಕೆಟ್ಗಾಗಿ ಕೆಪಿಸಿಸಿಗೆ ಅರ್ಜಿ ಸಲ್ಲಿಸಲು ಸೋಮವಾರ ಕಡೆಯ ದಿನವಾಗಿದ್ದು, ಸುಮಾರು 2450 ಮಂದಿ ಅರ್ಜಿಯನ್ನು ಪಡೆದುಕೊಂಡಿದ್ದರು. ಈ ಪೈಕಿ 1600 ಮಂದಿ ಅರ್ಜಿ ಸಲ್ಲಿಸಿದ್ದಾರೆ. ನಿರೀಕ್ಷೆಯಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ, ಅವರ ಪುತ್ರ ಡಾ.ಯತೀಂದ್ರ ಅವರು ವರುಣಾದಿಂದ ಅರ್ಜಿ ಸಲ್ಲಿಸಿರುವುದು ಸೇರಿದಂತೆ ಹಲವಾರು ಕಾಂಗ್ರೆಸ್ ಮುಖಂಡರು ಹಾಗೂ ಅವರ ಪುತ್ರರು ಟಿಕೆಟ್ ಕೋರಿ ಅರ್ಜಿ ಸಲ್ಲಿಸಿದ್ದಾರೆ.
2018ರಲ್ಲಿ ನಡೆಯಲಿರುವ 224 ಕ್ಷೇತ್ರಗಳ ಚುನಾವಣೆಗೆ ಸ್ಪರ್ಧೆ ಬಯಸಿ ಮತ್ತೊಮ್ಮೆ ಅರ್ಜಿಸಲ್ಲಿಸಿದ್ದಾರೆ. ಹಾಲಿ 123 ಶಾಸಕರಿಗೆ ಬಹುತೇಕ ಟಿಕೆಟ್ ಸಿಗುವುದು ಖಚಿತ ಎನ್ನಲಾಗುತ್ತಿದೆ ಕಾಂಗ್ರೆಸ್ ಮೂಲಗಳು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.