
ಮುಜಫ್ಫರ್ಪುರ್[ಜೂ.19]: ರಾಜ್ಯದ ವಿವಿಧ ಭಾಗಗಳಲ್ಲಿ ಮೆದುಳಿನ ಉರಿಯೂತ ಸಮಸ್ಯೆಗೆ 152 ಮಕ್ಕಳು ಸಾವನ್ನಪ್ಪಿದ ಹೊರತಾಗಿಯೂ ಘಟನಾ ಸ್ಥಳಗಳಿಗೆ ಭೇಟಿ ನೀಡದೆ, ರಾಜಧಾನಿಯಲ್ಲಿಯೇ ಉಳಿದು ಟೀಕೆಗೆ ಗುರಿಯಾಗಿದ್ದ ಬಿಹಾರದ ಸಿಎಂ ನಿತೀಶ್ ಕುಮಾರ್ ಕೊನೆಗೂ ಎಚ್ಚೆತ್ತು ಕೊಂಡಿದ್ದಾರೆ.
ಮಂಗಳವಾರ ಡಿಸಿಎಂ ಸುಶೀಲ್ ಕುಮಾರ್ ಮೋದಿ, ಮತ್ತು ಆರೋಗ್ಯ ಸಚಿ ವರ ಜೊತೆಗೂಡಿದ ಸಿಎಂ, ಭಾರೀ ಪ್ರಮಾಣದಲ್ಲಿ ಮಕ್ಕಳ ಸಾವು ಸಂಭವಿಸಿದ ಮುಜಫ್ಫರ್ಪುರದ ಎಸ್ಕೆಎಂಸಿಎಚ್ ಮತ್ತು ಖಾಸಗಿ ವಲಯದ ಕೇಜ್ರಿವಾಲ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಆಸ್ಪತ್ರೆ ಮುಂಭಾಗದಲ್ಲಿ ಮಕ್ಕಳ ಪೋಷಕರು, ಗೋ ಬ್ಯಾಕ್ ಸಿಎಂ ನಿತೀಶ್ ಎಂದು ಘೋಷಣೆ ಕೂಗಿದ ಘಟನೆಯೂ ನಡೆಯಿತು.
ಆದಾಗ್ಯೂ, ಮಂಗಳವಾರ ಬೆಳಗ್ಗೆ ಎಸ್ ಕೆಎಂಸಿಎಚ್ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರು ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಸಿಎಂ ನಿತೀಶ್ ಕುಮಾರ್ ಬಳಿಕ, ಮಕ್ಕಳನ್ನು ದಾಖಲಿ ಸಿರುವ ವಾರ್ಡ್ಗಳಿಗೆ ತೆರಳಿ ಪರಿಶೀಲನೆ ನಡೆಸಿದರು. ಜೊತೆಗೆ ಎಲ್ಲಾ ಗ್ರಾಮೀಣ ಆರೋಗ್ಯ ಕೇಂದ್ರಗಳಲ್ಲೂ ಮಕ್ಕಳಿಗೆ ಚಿಕಿತ್ಸೆ ನೀಡಲು ಅಗತ್ಯವಾದ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.