ಇಂದು ಖಾತೆ ಹಂಚಿಕೆ ಖಚಿತ; ಯಡಿಯೂರಪ್ಪ

Published : Aug 25, 2019, 08:20 AM IST
ಇಂದು ಖಾತೆ ಹಂಚಿಕೆ ಖಚಿತ; ಯಡಿಯೂರಪ್ಪ

ಸಾರಾಂಶ

ನೂತನ ಸಚಿವರಿಗೆ ಖಾತೆ ಹಂಚಿಕೆ ಪ್ರಕ್ರಿಯೆ ಭಾನುವಾರ ಪೂರ್ಣವಾಗಲಿದ್ದು, ರಾಜ್ಯಪಾಲರಿಗೆ ಪಟ್ಟಿ ಕಳುಹಿಸಿ ಅನುಮೋದನೆ ಪಡೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಬೆಂಗಳೂರು (ಆ. 25): ನೂತನ ಸಚಿವರಿಗೆ ಖಾತೆ ಹಂಚಿಕೆ ಪ್ರಕ್ರಿಯೆ ಭಾನುವಾರ ಪೂರ್ಣವಾಗಲಿದ್ದು, ರಾಜ್ಯಪಾಲರಿಗೆ ಪಟ್ಟಿ ಕಳುಹಿಸಿ ಅನುಮೋದನೆ ಪಡೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ನೂತನ ಸಚಿವರಿಗೆ ಯಾವ ಖಾತೆ ಹಂಚಿಕೆ ಮಾಡಬೇಕು ಎಂಬ ಪಟ್ಟಿ ಅಂತಿಮಗೊಳಿಸಲಾಗಿದೆ. ಭಾನುವಾರ ರಾಜ್ಯಪಾಲರಿಗೆ ಕಳುಹಿಸಲಾಗುವುದು. ಶನಿವಾರವೇ ಪಟ್ಟಿಯನ್ನು ರಾಜ್ಯಪಾಲರಿಗೆ ಕಳುಹಿಸಿಕೊಡಲು ನಿರ್ಧರಿಸಲಾಗಿತ್ತು. ಆದರೆ, ಮಾಜಿ ಸಚಿವ ಅರುಣ್ ಜೇಟ್ಲಿ ನಿಧನದ ಹಿನ್ನೆಲೆಯಲ್ಲಿ ಭಾನುವಾರ ಕಳುಹಿಸಿಕೊಡಲು ತೀರ್ಮಾನಿಸಲಾಗಿದೆ ಎಂದರು.

ಖಾತೆ ಹಂಚಿಕೆಯಲ್ಲಿ ಯಾವುದೇ ಗೊಂದಲ ಇಲ್ಲ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಅಮಿತ್ ಶಾ ಜತೆ ಚರ್ಚಿಸಿ ಎಲ್ಲವನ್ನೂ ಅಂತಿಮಗೊಳಿಸಲಾಗಿದೆ. ಯಾರಿಗೆ ಯಾವ ಖಾತೆ ಹಂಚಿಕೆ ಮಾಡಬೇಕು ಎಂಬುದನ್ನು ಅಂತಿಮ ಮಾಡಲಾಗಿದೆ. ರಾಜ್ಯಪಾಲರಿಂದ ಅನುಮೋದನೆ ಪಡೆದು ಮುಂದಿನ ಪ್ರಕ್ರಿಯೆಯನ್ನು ನಡೆಸಲಾಗುವುದು ಎಂದು ಹೇಳಿದರು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೈಗಾ ಅಣುಸ್ಥಾವರ: ಅಣು ವಿದ್ಯುತ್ ಉತ್ಪಾದನೆಯಲ್ಲಿ ಸಂಪೂರ್ಣ ಆತ್ಮ ನಿರ್ಭರತೆ: ಡಾ.ಅಜಿತ್ ಕುಮಾರ್ ಮೊಹಂತಿ
ಇಸ್ರೇಲ್ ನಾಯಕ ಖಮೇನಿ ಹತ್ಯೆಗೆ ರಷ್ಯಾ, ಚೀನಾ, ಉತ್ತರ ಕೊರಿಯಾದ ಪ್ರತಿಕ್ರಿಯೆ ಏನು?