ಮತ್ತೆ ಮಳೆಯ ಅಬ್ಬರ : 18 ಬಲಿ

Published : Aug 09, 2018, 04:03 PM IST
ಮತ್ತೆ ಮಳೆಯ ಅಬ್ಬರ : 18 ಬಲಿ

ಸಾರಾಂಶ

ಒಂದಷ್ಟು  ದಿನಗಳ ಕಾಲ ತಣ್ಣಗಿದ್ದ ಮಳೆರಾಯ ಮತ್ತೆ ಅಬ್ಬರಿಸಲು ಆರಂಭಿಸಿದ್ದಾರೆ. ಭಾರೀ ಮಳೆಯಿಂದ ಹಲವೆಡೆ ಭೂ ಕುಸಿತ ಸಂಭವಿಸಿದ್ದು ಕೇರಳದಲ್ಲಿ ಒಟ್ಟು 18 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 

ತಿರುವನಂತಪುರ :  ಒಂದಷ್ಟು ದಿನಗಳ ಕಾಲ ಬಿಡುವು ನೀಡಿದ್ದ  ಮುಂಗಾರು ಮಳೆ ಇದೀಗ ಮತ್ತೆ ತನ್ನ ಅಬ್ಬರವನ್ನು ಆರಂಭಿಸಿದೆ. ಕೇರಳದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು,  18 ಮಂದಿ ಸಾವಿಗೀಡಾಗಿದ್ದಾರೆ. 

ಹಲವೆಡೆ ಭಾರೀ ಭೂ ಕುಸಿತ ಸಂಭವಿಸಿದೆ. ಇಡುಕ್ಕಿ ಪ್ರದೇಶದಲ್ಲಿ ಭೂ ಕುಸಿತ ಸಂಭವಿಸಿ 10 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಕಣ್ಣುರಿನಲ್ಲಿ ಇಬ್ಬರು ವಯನಾಡು ಪ್ರದೇಶದಲ್ಲಿ ಓರ್ವ ವ್ಯಕ್ತಿ, ಕೋಚಿಕ್ಕೋಡ್, ಪಾಲಕ್ಕಾಡ್ ಗಳಲ್ಲಿಯೂ ಸಾವಿಗೀಡಾಗಿದ್ದಾರೆ. 

ಅಲ್ಲದೇ ಮಣ್ಣಿನಡಿಯಲ್ಲಿ ಸಿಲುಕಿದ್ದ ಇಬ್ಬರು ವ್ಯಕ್ತಿಗಳನ್ನು ರಕ್ಷಣೆ ಮಾಡಲಾಗಿದೆ.  ಇಡಮಲಯಾರ್ ಡ್ಯಾಮ್ ನಲ್ಲಿ ಅತ್ಯಧಿಕ ಪ್ರಮಾಣದಲ್ಲಿ ನೀರು ತುಂಬಿದ್ದು, 600 ಕ್ಯೂಸೆಕ್ ನೀರನ್ನು ಹೊರಬಿಡಲಾಗಿದೆ. 

ವಯನಾಡು ಹಾಗೂ ಕೋಜಿಕೋಡ್ ಪ್ರದೇಶದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು ಪ್ರವಾಹ ಪರಿಸ್ಥಿತಿ ನಿರ್ಮಾಣವಾಗುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!