
ಚೆನ್ನೈ(ಡಿ.14): ವಾರ್ಧಾ ಚಂಡಮಾರುತದಿಂದಾಗಿ ತಮಿಳುನಾಡಿನಲ್ಲಿ 6,750 ಕೋಟಿಯಷ್ಟು ನಷ್ಟವಾಗಿದೆ ಎಂದು ಭಾರತೀಯ ವಾಣಿಜ್ಯೋದ್ಯಮ ಮಹಾ ಸಂಘ ಅಂದಾಜಿಸಿದೆ.
ಚಂಡಮಾರುತದಿಂದಾಗಿ ಮರಗಳು ಉರುಳಿವೆ, ಕಟ್ಟಡಗಳು ಹಾನಿಯಾಗಿವೆ. ಬಾಳೆ ತೋಟ, ಪಪ್ಪಾಯಿ, ಭತ್ತ ಮತ್ತಿತರ ಬೆಳೆಗಳಿಗೆ ಹಾನಿಯಾಗಿದೆ. ಮನೆಗಳ ಮೇಲ್ಚಾವಣಿ ಹಾರಿ ಹೋಗಿವೆ. ವಿದ್ಯುತ್ ಕಂಬಗಳ ನೆಲಕ್ಕುರುಳಿವೆ. ವಿದ್ಯುತ್ ಪೂರೈಕೆ ಸ್ಥಗಿತಗೊಂಡ ಕಾರಣ ನಗರ ಮತ್ತು ಗ್ರಾಮೀಣ ಪ್ರದೇಶಗಳೆರಡರಲ್ಲೂ ತೊಂದರೆಯಾಗಿದೆ.
ವಿಮಾನ ಮತ್ತು ರೈಲು ಸೇರಿ ಎಲ್ಲ ಬಗೆಯ ಸಂಚಾರ ಸ್ಥಗಿತಗೊಂಡ ಕಾರಣ ಅರ್ಥ ವ್ಯವಸ್ಥೆಗೆ ಭಾರಿ ಹೊಡೆತ ಬಿದ್ದಿದೆ. ಇನ್ನೂ ವಾರ್ಧಾ ಚಂಡಮಾರುತದಿಂದಾಗಿ ತಮಿಳುನಾಡಿನ ಆರು ಜಿಲ್ಲೆಗಳಲ್ಲಿ 18 ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.