
ಸೂರತ್(ಆ.14): ಆಗಸ್ಟ್ 15ರಂದು ದೇಶಾದ್ಯಂತ 70ನೇ ಸ್ವಾತಂತ್ರ್ಯೋತ್ಸವ ಆಚರಣೆಗೆ ಅದ್ಧೂರಿ ತಯಾರಿ ನಡೆದಿವೆ. ಇದರ ಮಧ್ಯೆ ಗುಜರಾತ್ನ ವಿದ್ಯಾರ್ಥಿಗಳು ವಿಶೇಷವಾಗಿ ಭಾರತದ ನಕ್ಷೆ ಮಾಡಿ, ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ಸಲ್ಲಿಸಿದ್ದಾರೆ.
ಇಲ್ಲಿನ ಸ್ವಾಮಿ ನಾರಾಯಣ್ ಗುರುಕುಲ ಶಾಲೆಯ 1,800 ವಿದ್ಯಾರ್ಥಿಗಳು ಒಟ್ಟಿಗೆ ಸೇರಿ ಭಾರತದ ನಕ್ಷೆ ರಚನೆ ಮಾಡುವ ಮೂಲಕ ಯೋಧರಿಗೆ ವಿಶೇಷ ಗೌರವ ಸಲ್ಲಿಸಿದ್ದಾರೆ. ಇದಕ್ಕಾಗಿ ಶಾಲಾ ಮಕ್ಕಳು ಕಳೆದ ಒಂದು ತಿಂಗಳಿಂದ ಸಕಲ ಸಿದ್ಧತೆ ನಡೆಸಿದ್ದಾಗಿ ತಿಳಿದು ಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.