
ಬೆಂಗಳೂರು(ಮಾ.22): ಅನಧಿಕೃತವಾಗಿ 120 ದಿನಗಳಿಗಿಂತ ಹೆಚ್ಚಾಗಿ ಗೈರು ಹಾಜರಾದ 181 ಗ್ರೂಪ್ ಸಿ ಮತ್ತು ಗ್ರೂಪ್ ಡಿ ನೌಕರರನ್ನು ಕರ್ತವ್ಯಲೋಪ ಆರೋಪದ ಮೇಲೆ ಸರ್ಕಾರಿ ಸೇವೆಯಿಂದ ವಜಾ ಮಾಡಿ ಆರೋಗ್ಯ ಇಲಾಖೆ ಆಯುಕ್ತ ಸುಬೋಧ್ ಯಾದವ್ ಆದೇಶ ಹೊರಡಿಸಿದ್ದಾರೆ.
ರಾಜ್ಯದ ವಿವಿಧೆಡೆ ಕಾರ್ಯ ನಿರ್ವಹಿಸುತ್ತಿರುವ ಗ್ರೂಪ್ ಸಿ ಮತ್ತು ಗ್ರೂಪ್ ಡಿ ನೌಕರರಿಗೆ ಕರ್ತವ್ಯಲೋಪ ಆರೋಪ ಸಂಬಂಧ ನೋಟಿಸ್ ಜಾರಿಗೊಳಿಸಲಾಗಿತ್ತು. 120 ದಿನಗಳಿಗಿಂತ ಹೆಚ್ಚು ಕಾಲ ಅನಧಿಕೃತವಾಗಿ ಕರ್ತವ್ಯಕ್ಕೆ ಹಾಜರಾಗಿದ್ದ 210 ಗ್ರೂಪ್ ಸಿ ಮತ್ತು ಗ್ರೂಪ್ ಡಿ ನೌಕರರಿಗೆ ನೋಟಿಸ್ ಜಾರಿಗೊಳಿಸಲಾಗಿದ್ದು, ಈ ಪೈಕಿ 21 ಮಂದಿ ಕರ್ತವ್ಯಕ್ಕೆ ಹಾಜರಾಗಲು ಮುಂದಾಗಿ, ಸ್ಥಳ ನಿಯುಕ್ತಿ ಕೋರಿದ್ದಾರೆ. ಕೆಲವರು ಕರ್ತವ್ಯಕ್ಕೆ ಹಾಜರಾಗಲು ಕಾಲಾವಕಾಶ ಕೋರಿದರೆ, ಇನ್ನು ಕೆಲವರು ಸಾವನ್ನಪ್ಪಿದ್ದಾರೆ. ಉಳಿದ 181 ಮಂದಿ ನೋಟಿಸ್ಗೆ ಯಾವುದೆ ಉತ್ತರ ನೀಡದ ಕಾರಣ ಅವರನ್ನು ವಜಾಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.