
ಸಾಂಗ್ಲಿ(ಮಾ.06): ರಾಜ್ಯಕ್ಕೆ ಹೊಂದಿಕೊಂಡಿರುವ ಮಹಾರಾಷ್ಟ್ರ ಗಡಿಯ ಗ್ರಾಮದ ಚರಂಡಿಯಲ್ಲಿ 19 ಭ್ರೂಣಗಳು ಪತ್ತೆಯಾಗಿವೆ
ಗಡಿಯ ಮಾಯ್ಶಲ್ ಗ್ರಾಮದ ಚರಂಡಿಯಲ್ಲಿ ನೀಲಿ ಪ್ಲಾಸ್ಟಿಕ್ ಚೀಲದಲ್ಲಿದ್ದ ಭ್ರೂಣಗಳನ್ನು ಮಹಾರಾಷ್ಟ್ರ ಪೊಲೀಸರು ಪತ್ತೆ ಮಾಡಿದ್ದಾರೆ. ಚರಂಡಿಯ ಅನತಿ ದೂರದಲ್ಲಿಯೇ ಖಾಸಗಿ ಕ್ಲಿನಿಕ್ ಇದ್ದು, ಇಲ್ಲಿನ ಮಹಿಳಾ ವೈದ್ಯೆಯೇ ಈ ಭ್ರೂಣ ಹತ್ಯೆಗಳನ್ನು ಮಾಡಿ ಚರಂಡಿಯಲ್ಲಿ ಎಸೆದಿರುವ ಸಾಧ್ಯತೆಯಿದೆ.
ಭ್ರೂಣಗಳು ಸಿಕ್ಕಿದ ದಿನದಿಂದ ಮಹಿಳಾ ವೈದ್ಯೆ ನಾಪತ್ತೆಯಾಗಿದ್ದಾಳೆ. ಖಾಸಗಿ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬಳು ಗರ್ಭಪಾತ ಮಾಡಿಸಿಕೊಂಡ ನಂತರ ಸಾವೀಗೀಡಗಿದ್ದು, ಆನಂತರ ಪ್ರಕರಣ ಬೆಳಕಿಗೆ ಬಂದಿದೆ. ಗಡಿ ಗ್ರಾಮವಾದ ಕಾರಣ ರಾಜ್ಯದಿಂದಲೂ ಭ್ರೂಣ ಹತ್ಯೆಗಳು ನಡೆದಿರುವ ಸಾಧ್ಯತೆಯಿದ್ದು, ಈ ಸಂಬಂಧ ಮಹಾರಾಷ್ಟ್ರ ಸರ್ಕಾರ ರಾಜ್ಯ ಸರ್ಕಾರದ ನೆರವನ್ನು ಕೋರಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.