
ಕೊಯಂಬತ್ತೂರು[ಜು.13] ವಿಪತ್ತು ಸನ್ನದ್ಧತೆ ಜಾಗೃತಿ ಮೂಡಿಸುವ ಪ್ರಾತ್ಯಕ್ಷಿಕೆ ಆ ಕಾಲೇಜಿನಲ್ಲಿ ನಡೆಯುತ್ತಿತ್ತು. ಈ ವೇಳೆ ಆತಂಕಕ್ಕೆ ಸಿಲುಕಿದ್ದ ವಿದ್ಯಾರ್ಥಿನಿಯನ್ನು ಟ್ರೈನರ್ ಕೆಲಕ್ಕೆ ತಳ್ಳಿದ ಪರಿಣಾಮ ವಿದ್ಯಾರ್ಥಿನಿ ದುರಂತ ಸಾವು ಕಾಣಬೇಕಾಯಿತು.
ಬಲವಂತವಾಗಿ ತಳ್ಳಿದ ಪರಿಣಾಮ ಆಕೆಯ ತಲೆ ಮೊದಲ ಮಹಡಿಯ ತಡೆಗೋಡೆಗೆ ಬಡಿದು ಸಾವನ್ನಪ್ಪಿದ್ದಾಳೆ. ಕೊವಯ್ ಕಲೈಮಗಲ್ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ವಿಪತ್ತು ಸಂದರ್ಭದಲ್ಲಿ ತೆಗೆದುಕೊಳ್ಳಬೇಕಾದ ಜಾಗೃತಿ ಕ್ರಮಗಳ ಬಗ್ಗೆ ಡೆಮೋ ನೀಡುತ್ತಿದ್ದ ಸಂದರ್ಭ ಅವಘಡ ನಡೆದಿದೆ.ಸುರಕ್ಷತೆಗಾಗಿ ಒಂದು ಹಗ್ಗ ಕಟ್ಟಲಾಗಿತ್ತು. ಕೆಳಗಡೆ ಯುವಕರ ತಂಡ ನೆಟ್ ಅನ್ನು ಹಿಡಿದುಕೊಂಡಿದ್ದರು.
ಮೃತ ವಿದ್ಯಾರ್ಥಿನಿ ಲೋಕೇಶ್ವರಿ ಈ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಎರಡನೇ ಮಹಡಿಯಲ್ಲಿ ಕುಳಿತಿದ್ದ ಆಕೆ ಕೆಳಗೆ ಬೀಳಬೇಕು ಎನ್ನುವಾಗ ಕೊಂಚ ಆತಂಕದಲ್ಲಿದ್ದರು. ನಂತರ ಇನ್ನೇನು ಮುಂದಕ್ಕೆ ಹಾರಬೇಕು ಎನ್ನುವಷ್ಟರಲ್ಲಿ ಆಕೆಯ ಹಿಂದೆ ನಿಂತಿದ್ದ ಟ್ರೈನರ್ ಆಕೆಯನ್ನು ತಳ್ಳಿದ್ದಾನೆ. ಮೊದಲೇ ಆತಂಕದಲ್ಲಿದ್ದ ಆಕೆ ಮುಂದಕ್ಕೆ ಹಾರದ ಪರಿಣಾಮ ತಲೆ ಅಪ್ಪಳಿಸಿ ಸಾವನ್ನಪ್ಪಿದ್ದಾಳೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.