ಇಂಡೋ-ಪಾಕ್ ಯುದ್ಧದ ಹೀರೋ ಬ್ರಿಗೇಡಿಯರ್ ಕುಲ್ದೀಪ್ ನಿಧನ

Published : Nov 18, 2018, 12:41 PM IST
ಇಂಡೋ-ಪಾಕ್ ಯುದ್ಧದ ಹೀರೋ ಬ್ರಿಗೇಡಿಯರ್ ಕುಲ್ದೀಪ್ ನಿಧನ

ಸಾರಾಂಶ

ಚಾಂದ್‌ಪುರಿ ಅವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಅವರನ್ನು ಮೊಹಾಲಿಯ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಶನಿವಾರ ಕೊನೆಯುಸಿರೆಳೆದರು. ಸೋಮವಾರ ಸೇನಾ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆ ನಡೆಯಲಿದೆ. ಯುದ್ಧ ಸಂದರ್ಭದಲ್ಲಿ ತೋರಿದ್ದ ಅಪ್ರತಿಮ ಶೌರ್ಯಕ್ಕಾಗಿ ಚಾಂದ್‌ಪುರಿ ಅವರಿಗೆ ‘ಮಹಾವೀರ ಚಕ್ರ’ ಪ್ರಶಸ್ತಿ ಪ್ರಾಪ್ತಿಯಾಗಿತ್ತು.

ಚಂಡೀಗಢ[ನ.18]: 1971ರ ಭಾರತ-ಪಾಕಿಸ್ತಾನ ನಡುವಿನ ಐತಿಹಾಸಿಕ ‘ಲಾಂಗೇವಾಲಾ ಕದನ’ದ ರೂವಾರಿ ಬ್ರಿಗೇಡಿಯರ್ (ನಿವೃತ್ತ) ಕುಲದೀಪ್ ಸಿಂಗ್ ಚಾಂದ್‌ಪುರಿ (78) ಶನಿವಾರ ನಿಧನ ಹೊಂದಿದರು.
ಚಾಂದ್‌ಪುರಿ ಅವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಅವರನ್ನು ಮೊಹಾಲಿಯ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಶನಿವಾರ ಕೊನೆಯುಸಿರೆಳೆದರು. ಸೋಮವಾರ ಸೇನಾ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆ ನಡೆಯಲಿದೆ. ಯುದ್ಧ ಸಂದರ್ಭದಲ್ಲಿ ತೋರಿದ್ದ ಅಪ್ರತಿಮ ಶೌರ್ಯಕ್ಕಾಗಿ ಚಾಂದ್‌ಪುರಿ ಅವರಿಗೆ ‘ಮಹಾವೀರ ಚಕ್ರ’ ಪ್ರಶಸ್ತಿ ಪ್ರಾಪ್ತಿಯಾಗಿತ್ತು.

ಭಾರತ-ಪಾಕ್ ಯುದ್ಧ ರೂವಾರಿ: 1971ರಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಗಡಿಯ ವಿವಿಧೆಡೆ ಯುದ್ಧ ಸಂಭವಿಸಿದಾಗ ಮೊದಲ ಯುದ್ಧ ನಡೆದಿದ್ದು ರಾಜಸ್ಥಾನದ ಥಾರ್ ಮರುಭೂಮಿ ಪ್ರದೇಶದಲ್ಲಿರುವ ಭಾರತ-ಪಾಕ್ ಗಡಿಯ ಲಾಂಗೇವಾಲಾ ಎಂಬಲ್ಲಿ. ಆ ವೇಳೆ ಪಂಜಾಬ್ ರೆಜಿಮೆಂಟ್‌ನ 23ನೇ ಸೇನಾ ಬಟಾಲಿಯನ್‌ನ ಕಮಾಂಡರ್ ಆಗಿ ಯುದ್ಧ ಮುಂದಾಳತ್ವವನ್ನು ಭಾರತದ ಪರ ವಹಿಸಿದ್ದು ಬ್ರಿಗೇಡಿಯರ್ ಚಾಂದ್‌ಪುರಿ ಅವರು. ಪಾಕಿಸ್ತಾನದ ವಿರುದ್ಧ ಹೋರಾಡುವ ಸಂದರ್ಭದಲ್ಲಿ ಭಾರತಕ್ಕೆ ಕಷ್ಟಕರ ಸಂದರ್ಭ ಎದುರಾಗಿತ್ತು.

ಒಂದು ಕಡೆ ಪಾಕಿಸ್ತಾನದ ದಾಳಿಯ ಅಬ್ಬರದಿಂದಾಗಿ ಯುದ್ಧ ಕಣದಿಂದ ಹಿಂದೆ ಸರಿಯಬೇಕಿತ್ತು ಅಥವಾ ಹೆಚ್ಚಿನ ಸೇನಾಪಡೆಗಳು ಯುದ್ಧಕ್ಕೆ ಸೇರಿಕೊಳ್ಳುವವರೆಗೆ ಪಾಕ್ ದಾಳಿಯನ್ನು ಸಮರ್ಥವಾಗಿ ಎದುರಿಸಬೇಕಿತ್ತು. ಇಂಥ ಸಂದರ್ಭದಲ್ಲಿ 2000 ಸೈನಿಕರನ್ನು ಹೊಂದಿದ್ದ ಪಾಕ್ ಪಡೆಯನ್ನು ಕೇವಲ 120 ಯೋಧರ ತಮ್ಮ ತುಕಡಿಯ ಮೂಲಕ ಹಿಮ್ಮೆಟ್ಟಿಸಿದ್ದರು. ರಕ್ಷಣಾತ್ಮಕ ನೀತಿ ಅನುಸರಿಸಿ ಭಾರತದ ಗಡಿಯನ್ನು ಕಾಪಾಡಿದ್ದರು.

ಇವರ ಸಾಹಸ ಸಿನಿಮಾ ಆಗಿತ್ತು

ಖ್ಯಾತ ನಟ ಸನ್ನಿ ಡಿಯೋಲ್ ಅಭಿನಯದಲ್ಲಿ 1997ರಲ್ಲಿ ‘ಬಾರ್ಡರ್’ ಹಿಂದಿ ಚಿತ್ರ ಬಿಡುಗಡೆಯಾಗಿ ಭಾರತದಲ್ಲಿ ದೇಶಪ್ರೇಮದ ಅಲೆ ಉಕ್ಕಿಸಿತಲ್ಲದೇ, ಗಲ್ಲಾಪೆಟ್ಟಿಗೆಯನ್ನು ಧೂಳೆಬ್ಬಿಸಿತ್ತು. ಈ ಸಿನಿಮಾ ಬ್ರಿಗೇಡಿಯರ್ ಚಾಂದ್‌ಪುರಿ ಅವರ ಸಾಹಸವನ್ನೇ ಆಧರಿಸಿದ್ದಾಗಿತ್ತು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದುಡಿಯುವ ಮಹಿಳೆಗೆ ಪತಿ ಜೀವನಾಂಶ ಕೊಡಬೇಕಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು
India Latest News Live: ದುಡಿಯುವ ಮಹಿಳೆಗೆ ಪತಿ ಜೀವನಾಂಶ ಕೊಡೇಕಿಲ್ಲ - ಹೈಕೋರ್ಟ್ ಮಹತ್ವದ ತೀರ್ಪು