
ನವದೆಹಲಿ (ಅ.10): 1996 ರಲ್ಲಿ ನಡೆದ ಸೋನೆಪತ್ ಬಾಂಬ್ ಸ್ಪೋಟ ಪ್ರಕರಣದ ಪ್ರಮುಖ ಆರೋಪಿ ಲಷ್ಕರೆ-ತೋಯ್ಬಾದ ಅಬ್ದುಲ್ ಕರೀಮ್ ಅಲಿಯಾಸ್ ತುಂಡಾಗೆ ಹರ್ಯಾಣ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಅವರ ಮೇಲೆ 1 ಲಕ್ಷ ರೂ ದಂಡವನ್ನೂ ವಿಧಿಸಿದೆ.
ಇಂದು ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ಉಸ್ತುವಾರಿ ನ್ಯಾಯಾಲಯ ಅಬ್ದುಲ್ ಕರೀಮ್’ಗೆ ಐಪಿಸಿ ಸೆಕ್ಷನ್ 307 (ಹತ್ಯೆ ಪ್ರಯತ್ನ), 120 ಬಿ (ಪಿತೂರಿ) ಅಡಿಯಲ್ಲಿ ಶಿಕ್ಷೆಯನ್ನು ವಿಧಿಸಿದೆ. ಈ ತೀರ್ಪನ್ನು ಪ್ರಶ್ನಿಸಿ ಜಿಲ್ಲಾ ನ್ಯಾಯಾಲಯಕ್ಕೆ ಮನವಿ ಸಲ್ಲಿಸುವುದಾಗಿ ಕರೀಮ್ ಪರ ವಕೀಲರು ಹೇಳಿದ್ದಾರೆ.
26/11 ಮುಂಬೈ ದಾಳಿಯ ನಂತರ 20 ಜನ ಭಯೋತ್ಪಾದಕರಲ್ಲಿ ಅಬ್ದುಲ್ ಕರೀಮ್ ಕೂಡಾ ಒಬ್ಬರು. ಅವರನ್ನು ನಮ್ಮ ವಶಕ್ಕೆ ನೀಡಿ ಎಂದು ಭಾರತ ಪಾಕಿಸ್ತಾನಕ್ಕೆ ಕೇಳಿಕೊಂಡಿತ್ತು. ಆನಂತರ 2013 ರಲ್ಲಿ ಅವರನ್ನು ಭಾರತ-ನೇಪಾಳ ಗಡಿಯಲ್ಲಿ ದೆಹಲಿ ಪೊಲೀಸರು ಅವರನ್ನು ಬಂಧಿಸಿದ್ದರು.
1996 ರಲ್ಲಿ ಸೋನೆಪತ್’ನಲ್ಲಿ ಬಾಂಬ್ ಸ್ಫೋಟ ನಡೆದಿತ್ತು. ಅದೃಷ್ಟವಶಾತ್ ಯಾರೂ ಕೂಡಾ ಸಾವನ್ನಪ್ಪಿರಲಿಲ್ಲ. ಕೆಲವರು ಗಾಯಗೊಂಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.