
ಬೀದರ್(ಸೆ.29): ದಸರಾ ರಜೆ ನಿಮಿತ್ತ ಹಳ್ಳಿಗೆ ಬಂದ ಇಬ್ಬರು ಬಾಲಕರು ಕೃಷಿ ಹೊಂಡದಲ್ಲಿ ಈಜಾಡಲು ಹೋಗಿ ನೀರು ಪಾಲಾದ ಘಟನೆ ಬೀದರ್ ತಾಲೂಕಿನ ಸಂಗೊಳಗಿ ಗ್ರಾಮದಲ್ಲಿ ನಡೆದಿದೆ.
ಮಂಜುನಾಥ(10) ಮತ್ತು ಅಭಿಷೇಕ(12) ನೀರುಪಾಲಾದ ದುರ್ದೈವಿಗಳು. ನಿನ್ನೆ ಸಂಜೆ ಮನೆಯಿಂದ ಹೊರ ಹೋದ ಈ ಬಾಲಕರು ನೇರವಾಗಿ ಜನವಾಡ ರಸ್ತೆಯಲ್ಲಿರುವ ಕೃಷಿಹೊಂಡದಲ್ಲಿ ಈಜಾಡಲು ಹೋಗಿ ನೀರುಪಾಲಾಗಿದ್ದಾರೆ. ಮೃತ ಬಾಲಕರಿಬ್ಬರು ಕೃಷಿ ಇಲಾಖೆ ಅಧಿಕಾರಿ ಬಸವರಾಜ ಬಿರಾದರ ಅವರ ಪುತ್ರರು.
ಘಟನಾ ಸ್ಥಳಕ್ಕೆ ಬೀದರ್ ಡಿವೈಎಸ್ಫಿ ಹುನಚಿಕಟ್ಟೆ ಭೇಟಿ ನೀಡಿದ್ದು, ಜನವಾಡ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.