
ಶ್ರೀನಗರ(ಮೇ.07): ಇತ್ತೀಚೆಗಷ್ಟೇ ಭಾರತದ ಗಡಿಯೊಳಗೆ ನುಸುಳಿ ಇಬ್ಬರು ಭಾರತೀಯ ಸೈನಿಕರ ಶಿರಚ್ಛೇದ ಮಾಡಿದ ಬಳಿಕ ಜಮ್ಮು-ಕಾಶ್ಮೀರದಾದ್ಯಂತ ಕಾರ್ಯಾಚರಣೆ ಕೈಗೊಂಡಿದ್ದ ಭದ್ರತಾ ಪಡೆಗಳು ಉಗ್ರರ ಅಡಗು ತಾಣಗಳಿಗಾಗಿ ತೀವ್ರ ಶೋಧ ನಡೆಸಿತ್ತು. ಆದರೆ, ಇದರ ಬೆನ್ನಲ್ಲೇ, ಕುಲ್ಗಾಂ ಜಿಲ್ಲೆಯಲ್ಲಿ ಶನಿವಾರದ ಉಗ್ರರ ಶಸಸಜ್ಜಿತ ದಾಳಿಯಲ್ಲಿ ಇಬ್ಬರು ಪೊಲೀಸರು ಮತ್ತು ಇಬ್ಬರು ನಾಗರಿಕರು ಬಲಿಯಾಗಿದ್ದಾರೆ. ಅಲ್ಲದೇ, ಘಟನೆಯಲ್ಲಿ ನಾಲ್ವರು ಪೊಲೀಸರು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಲ್ಗಾಂ ಜಿಲ್ಲೆ ಮೀರ್ ಬಜಾರ್ನಲ್ಲಿರುವ ಪೊಲೀಸ್ ಪಡೆ ಗುರಿಯಾಗಿಸಿ ಉಗ್ರರು ದಾಳಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
(ಸಾಂದರ್ಭಿಕ ಚಿತ್ರ)
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.