
ಕೇರಳ : ಚೆನ್ನೈ - ಮಂಗಳೂರು ಎಕ್ಸ್ ಪ್ರೆಸ್ ರೈಲಿನ 2 ಬೋಗಿಗಳು ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಹಳಿತಪ್ಪಿವೆ. ಈ ಘಟನೆಯಲ್ಲಿ ಯಾವುದೇ ರೀತಿಯ ಪ್ರಾಣಹಾನಿ ಸಂಭವಿಸಿಲ್ಲ.
ಕೇರಳದ ಶೋರಾನ್ ಪುರ ರೈಲ್ವೆ ನಿಲ್ದಾಣದ ಬಳಿ ಬೆಳಗ್ಗೆ 6.30ರ ಸುಮಾರಿಗೆ ಈ ಅವಘಡವಾಗಿದೆ.
ವಾರದ 7 ದಿನಗಳ ಕಾಲ ಸಂಚರಿಸುವ ಈ ರೈಲು ಸಂಜೆ 5 ಗಂಟೆ ವೇಳೆಗೆ ಚೆನ್ನೈ ನಿಲ್ದಾಣದಿಂದ ಹೊರಟು, ಬೆಳಗ್ಗೆ 9 ಗಂಟೆಗೆ ಮಂಗಳೂರು ತಲುಪಬೇಕಿತ್ತು. ಒಟ್ಟು 16 ಗಂಟೆಗಳ ಪ್ರಯಾಣದ ಬಳಿಕ ರೈಲು ಮಂಗಳೂರು ರೈಲು ನಿಲ್ದಾಣ ತಲುಪುತಿತ್ತು.
ಆದರೆ ಇದೀಗ ಹಳಿತಪ್ಪಿದ ಹಿನ್ನೆಲೆ ರೈಲು ಸಂಚಾರದಲ್ಲಿ ವ್ಯತ್ಯಯವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ