ಯುಗಾದಿ ಪುಣ್ಯ ಸ್ನಾನಕ್ಕೆಂದು ನದಿಗಿಳಿದಾಗ ದುರ್ಮರಣ

Published : Mar 18, 2018, 04:09 PM ISTUpdated : Apr 11, 2018, 01:00 PM IST
ಯುಗಾದಿ ಪುಣ್ಯ ಸ್ನಾನಕ್ಕೆಂದು ನದಿಗಿಳಿದಾಗ ದುರ್ಮರಣ

ಸಾರಾಂಶ

ತಿ.ನರಸೀಪುರ ಪಟ್ಟಣದ ತ್ರಿವೇಣಿ ಸಂಗಮ ನದಿಯಲ್ಲಿ ಮುಳುಗಿ ಇಬ್ಬರು ಯುವಕರ ಸಾವನ್ನಪ್ಪಿದ್ದಾರೆ. 

ಮೈಸೂರು (ಮಾ. 18): ತಿ.ನರಸೀಪುರ ಪಟ್ಟಣದ ತ್ರಿವೇಣಿ ಸಂಗಮ ನದಿಯಲ್ಲಿ ಮುಳುಗಿ ಇಬ್ಬರು ಯುವಕರ ಸಾವನ್ನಪ್ಪಿದ್ದಾರೆ. 

ನರಸೀಪುರ  ತಾಲ್ಲೂಕಿನ ಬನ್ನಹಳ್ಳಿಹುಂಡಿ ಗ್ರಾಮದ  ಪ್ರಮೋದ್ (12) ಹಾಗೂ ತೇಜೇಂದ್ರಪ್ರಸಾದ್ (17) ಮೃತಪಟ್ಟ ದುರ್ದೈವಿಗಳು. 

ಯುಗಾದಿ ಹಿನ್ನೆಲೆಯಲ್ಲಿ ಪುಣ್ಯ ಸ್ನಾನ ಮಾಡಲು ತಿ.ನರಸೀಪುರ ಪಟ್ಟಣದ ತ್ರಿವೇಣಿ ಸಂಗಮ ನದಿಗೆ ಇಳಿದಾಗ ಈಜು ಬರದೇ ಮುಳುಗಿ ಸಾವನ್ನಪ್ಪಿದ್ದಾರೆ.  ನದಿಯಲ್ಲಿ ಮುಳುಗಿದ ಯುವಕರ ಶವಕ್ಕಾಗಿ 1 ಗಂಟೆಗೆ ಹೆಚ್ಚು ಕಾಲ ನುರಿತ ಈಜುಗಾರರು  ಶೋಧ ಕಾರ್ಯ ನಡೆಸಿದ್ದಾರೆ.   ನೀರು ಸೇವಿಸಿ ನಿತ್ರಾಣಗೊಂಡಿದ್ದ ತೇಜೇಂದ್ರಪ್ರಸಾದ್ ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.  ಆತ ಕೂಡ ಚಿಕಿತ್ಸೆಗೆ ಸ್ಪಂದಿಸದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. 

ಈ ಸಂಬಂಧ ತಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೆದ್ದಾರಿಯಲ್ಲಿ ಇಳಿದು ಕಾರಿಗೆ ಡಿಕ್ಕಿ ಹೊಡೆದ ವಿಮಾನ: ವೀಡಿಯೋ
ಬೆಂಗಳೂರಲ್ಲಿ ಹೊಟ್ಟೆಪಾಡಿಗೆ ಕಳ್ಳತನ ಮಾಡ್ತಿದ್ದ ಕಳ್ಳನನ್ನೇ ರಾಬರಿ ಮಾಡಿದ ಖತರ್ನಾಕ್ ಕಿತಾಪತಿಗಳು!