
ಕಾನ್ಪುರ(ಡಿ.28): ಇಲ್ಲಿನ ದೇಹತ್'ನ ರೂರಾ-ಮೀರತ್ ನಡುವೆ ಸಂಚರಿಸುತ್ತಿದ್ದ ಸೇಲ್ದ-ಅಜ್ಮೇರ್ ಎಕ್ಸ್'ಪ್ರಸ್ ರೈಲಿನ 15 ಬೋಗಿಗಳು ಹಳಿ ತಪ್ಪಿದ ಪರಿಣಾಮ ಇಬ್ಬರು ಮೃತಪಟ್ಟು, 40 ಮಂದಿ ಗಾಯಗೊಂಡಿದ್ದಾರೆ. ಕಾನ್ಪುರರಿಂದ 50 ಕಿ.ಮೀ ದೂರದಲ್ಲಿರುವ ದೇಹತ್'ನಲ್ಲಿ ಮುಂಜಾನೆ 5.20ಕ್ಕೆ ಘಟನೆ ಸಂಭವಿಸಿದೆ ಎಂದು ಕಾನ್ಪುರದ ರೈಲು ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.
ಜಿಲ್ಲಾಡಳಿತ ಹಾಗೂ ರೈಲ್ವೆ ಅಧಿಕಾರಿಗಳು ಪರಿಹಾರ ಹಾಗೂ ನೆರವು ಕಾರ್ಯಾಚರಣೆಯನ್ನು ಕೈಗೊಂಡಿದ್ದು, ಆದಾಗ್ಯೂ ಹೆಚ್ಚಿನ ಪರಿಹಾರ ತಂಡಗಳು ಘಟನಾ ಸ್ಥಳಕ್ಕೆ ಆಗಮಿಸಲಿವೆ. ಗಾಯಗೊಂಡವರಿಗೆ ವೈದ್ಯಕೀಯ ನೆರವು ಒದಗಿಸಲಾಗುತ್ತಿದೆ. ಆ ರೈಲಿನಲ್ಲಿ ಪ್ರಯಾಣಿಸುತ್ತಿರುವವರನ್ನು ಬೇರೆ ರೈಲಿಗೆ ಸ್ಥಳಾಂತರಿಸಲಾಗಿದೆ ಜೊತೆಗೆ ಅಪಘಾತಕ್ಕೆ ಕಾರಣವಾದ ಅಂಶಗಳ ಬಗ್ಗೆ ತನಿಖೆಯನ್ನು ಆದೇಶಿಸಲಾಗಿದೆ ಎಂದು ರೈಲ್ವೆ ಸಚಿವ ಸುರೇಶ್ ಪ್ರಭು ಟ್ವಿಟ್ ಮಾಡಿದ್ದಾರೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.
ರೈಲ್ವೆ ಇಲಾಖೆ ಗಾಯಗೊಂಡವರ ನೆರವಿಗಾಗಿ ಸಹಾಯವಾಣಿ ಸಂಖ್ಯೆಗಳನ್ನು ಬಿಡುಗಡೆ ಮಾಡಿದ್ದು, ಸಂಬಂಧಿಸಿದವರು: 09935024350 ಹಾಗೂ 0979485953 ಸಂಪರ್ಕಿಸಬಹುದು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.