
ಬೆಂಗಳೂರು(ಅ.17): ಆರೆಸ್ಸೆಸ್`ನ ಗಣ ಮುಖಂಡ ರುದ್ರೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಖದೀರ್ ಮತ್ತು ಸಾಧಿಕ್ ಎಂಬ ಇಬ್ಬರನ್ನ ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ರುದ್ರೇಶ್ ಮತ್ತು ಖದೀರ್`ಗೂ ೩ ವರ್ಷದ ಹಿಂದೆ ಗಲಾಟೆ ನಡೆದಿತ್ತು. ಖದಿರ್, ರುದ್ರೇಶ್ ತಂಗಿಯನ್ನ ಚುಡಾಯಿಸಿದ್ದ. ಇದರಿಂದ ಕುಪಿತಗೊಂಡಿದ್ದ ರುದ್ರೇಶ್ ಖದೀರ್ ಮನೆಗೆ ತೆರಳಿ ಹಲ್ಲೆ ಮಾಡಿದ್ದರು. ಬಳಿಕ ಪ್ರಕರಣ ಪೊಲೀಸ್ ಠಾಣಾ ಮೆಟ್ಟಿಲೇರಿತ್ತು. ಇಬ್ಬರನ್ನೂ ಕರೆದು ಪೊಲೀಸರು ಸಂಧಾನ ಮಾಡಿ ಕಳುಹಿಸಿದ್ದರು. ಈ ಹಿನ್ನೆಲೆಯಲ್ಲಿ ಖದೀರ್ ನ ವಿಚಾರಣೆ ಚುರುಕಾಗಿದೆ. ನಿನ್ನೆ ಸಂಜೆಯಿಮದಲೇ ಪೊಳಿಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.