ಸಚಿವರ ಗುರಿಯಾಗಿರಿಸಿಕೊಂಡು ಉಗ್ರರ ಬಾಂಬ್ ದಾಳಿ, ಜಸ್ಟ್ ಬಚಾವ್!

Published : Sep 01, 2019, 09:08 PM IST
ಸಚಿವರ ಗುರಿಯಾಗಿರಿಸಿಕೊಂಡು ಉಗ್ರರ ಬಾಂಬ್ ದಾಳಿ, ಜಸ್ಟ್ ಬಚಾವ್!

ಸಾರಾಂಶ

ಬಾಂಗ್ಲಾದೇಶದಲ್ಲಿ ಉಗ್ರ ದಾಳಿ/ ಸಚಿವರನ್ನು ಗುರಿಯಾಗಿಸಿಕೊಂಡು ನಡೆದ ದಾಳಿ/ ಅಪಾಯದಿಂದ ಸಚಿವ ಬಾಲಬಾಲ ಪಾರು/ ಹೆಚ್ಚಿನ ಮಾಹಿತಿ ಕಲೆಹಾಕುತ್ತಿರುವ ಪೊಲೀಸರು

ಢಾಕಾ[ಸೆ. 01]  ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಮಂತ್ರಿಯೊಬ್ಬರನ್ನು ಗುರಿಯಾಗಿಸಿಕೊಂಡು ನಡೆಸಿದ ಬಾಂಬ್ ದಾಳಿಯಲ್ಲಿ ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ. ಶನಿವಾರ ರಾತ್ರಿ ಸೈನ್ಸ್ ಲ್ಯಾಬ್ ರಸ್ತೆ ಮಾರ್ಗದಲ್ಲಿ ಸಾಗುತ್ತಿದ್ದ ಸಚಿವರ ಕಾರ್ ಮೇಲೆ ಬಾಂಬ್ ಎಸೆಯಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಘಟನೆಯಲ್ಲಿ ಬಾಂಗ್ಲಾದೇಶದ ಸಚಿವ ಬಾಲಬಾಲ ಪ್ರಾಣಪಾಯದಿಂದ ಪಾರಾಗಿದ್ದಾರೆ. ಇಸ್ಲಾಮಿಕ್ ಸ್ಟೇಟ್ (ಐಎಸ್‌ಐ) ಉಗ್ರ ಸಂಘಟನೆ ದಾಳಿಯ ಹೊಣೆ ಹೊತ್ತುಕೊಂಡಿದೆ.

ಸಚಿವರ ಭದ್ರತಾ ಪಡೆ ತಂಡದಲ್ಲಿ ಆರು ಮಂದಿ ಪೊಲೀಸರಿದ್ದರು. ಘಟನೆ ನಡೆದ ಸಮಯದಲ್ಲಿ ಸಚಿವ ಬಾಲಬಾಲ ಅವರು ಬಾಂಗ್ಲಾದೇಶದ ಗಡಿ ಕಾವಲು ಕಾರ್ಯಕ್ರಮಕ್ಕೆ ತೆರಳುತ್ತಿದ್ದರು. ಸಚಿವರ ಕಾರು ಹೋಗುತ್ತಿರುವುದನ್ನು ಗಮನಿಸಿ ಬಾಂಬ್ ಎಸೆಯಲಾಗಿದೆ.

ಭಯೋತ್ಪಾದಕರು ನಡೆಸಿದ ಸ್ಪೋಟದಲ್ಲಿ ಶಹಾಬುದ್ದೀನ್ ಸೇರಿದಂತೆ ಟ್ರಾಫಿಕ್ ಪೊಲೀಸ್ ಅಮೀನುಲ್ ಇಸ್ಲಾಂ ಎಂಬವರು ಗಂಭೀರ ಗಾಯಗೊಂಡಿದ್ದಾರೆ. ಇವರಿಬ್ಬರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ತನಿಖೆ ನಡೆಸುತ್ತಿದ್ದು ಮಾಹಿತಿ ಕಲೆಹಾಕಲಾಗುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ
ಸಿಎಂ ರೇಸಲ್ಲಿ ಡಿಕೆಶಿ ಒಬ್ಬರೇ ಇಲ್ಲ, ಎಚ್‌ಕೆ, ಪರಂ, ಎಂಬಿಪಾ ಕೂಡ ಅರ್ಹ ಇದ್ದಾರೆ: ಕೆ.ಎನ್‌.ರಾಜಣ್ಣ