ಮಹಾರಾಷ್ಟ್ರದ ಕೊಯ್ನಾದಿಂದ ರಾಜ್ಯಕ್ಕೆ ನೀರು

By Suvarna Web DeskFirst Published Apr 11, 2017, 5:32 PM IST
Highlights

ಮಾ.10ರಂದು ಸಂಸದ ಪ್ರಹ್ಲಾದ್ ಜೋಷಿ, ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ, ಅಥಣಿ ಶಾಸಕ ಲಕ್ಷ್ಮಣ್ ಸವದಿ ನೇತೃತ್ವದ ಬಿಜೆಪಿ ನೇತೃತ್ವದ ನಿಯೋಗ ನೀರು ಬಿಡುಗಡೆ ಮಾಡಲು ಮನವಿ ಮಾಡಿದ್ದರು.

ಬೆಂಗಳೂರು(ಏ.11): ಇಂದು ರಾತ್ರಿ ಕೊಯ್ನಾ ಜಲಾಶಯದಿಂದ ರಾಜ್ಯಕ್ಕೆ 2.5 ಟಿಎಂಸಿ ನೀರು ಬಿಡುಗಡೆ ಮಾಡಲು ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಸೂಚನೆ ನೀಡಿದ್ದಾರೆ.

ಮಾ.10ರಂದು ಸಂಸದ ಪ್ರಹ್ಲಾದ್ ಜೋಷಿ, ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ, ಅಥಣಿ ಶಾಸಕ ಲಕ್ಷ್ಮಣ್ ಸವದಿ ನೇತೃತ್ವದ ಬಿಜೆಪಿ ನೇತೃತ್ವದ ನಿಯೋಗ ನೀರು ಬಿಡುಗಡೆ ಮಾಡಲು ಮನವಿ ಮಾಡಿದ್ದರು.

'ನಮ್ಮ ಮನವಿಗೆ ಸ್ಪಂದಿಸಿ 2.5 ಟಿಎಂಸಿ ನೀರನ್ನು ಕೊಯ್ನಾ ಜಲಾಶಯದಿಂದ ಬಿಡಲು ಸೂಚಿಸಿರುವ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಹಾಗೂ ಮಹಾರಾಷ್ಟ್ರ ಸರಕಾರಕ್ಕೆ ಧನ್ಯವಾದಗಳು' ಎಂದು ಅಥಣಿ ಶಾಸಕ ಶ್ರೀ ಲಕ್ಷ್ಮಣ ಸಂಗಪ್ಪ ಸವದಿ ತಿಳಿಸಿದ್ದಾರೆ.

click me!