
ಬೆಂಗಳೂರು (ಜ.08): ನೈಋತ್ಯ ರೈಲ್ವೆಯು ಸಂಕ್ರಾಂತಿ ಮತ್ತು ಗಣರಾಜ್ಯೋತ್ಸವದ ರಜೆ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಯಶವಂತಪುರ-ಬೆಳಗಾವಿ ನಡುವೆ ಎರಡು ವಿಶೇಷ ರೈಲು ಸಂಚಾರಕ್ಕೆ ವ್ಯವಸ್ಥೆ ಮಾಡಿದೆ.
ಜ.12 ರಂದು ರಾತ್ರಿ 8.15ಕ್ಕೆ ಯಶವಂತಪುರದಿಂದ ಹೊರಡಲಿರುವ ರೈಲು ಮರುದಿನ ಬೆಳಗ್ಗೆ 8.10ಕ್ಕೆ ಬೆಳಗಾವಿ ತಲುಪಲಿದೆ. ಇದೇ ರೈಲು ಜ.15 ಸೋಮವಾರ ರಾತ್ರಿ 7.10ಕ್ಕೆ ಬೆಳಗಾವಿಯಿಂದ ಹೊರಟು ಮಂಗಳವಾರ ಬೆಳಗ್ಗೆ 6.20ಕ್ಕೆ ಯಶವಂತಪುರ ತಲುಪಲಿದೆ.
ಜ.25ರಂದು ರಾತ್ರಿ 8.15ಕ್ಕೆ ಯಶವಂತಪುರದಿಂದ ಬೆಳಗಾವಿಗೆ ವಿಶೇಷ ರೈಲು ಸಂಚಾರವಿದ್ದು, ಮರುದಿನ ಬೆಳಗ್ಗೆ 8.10ಕ್ಕೆ ಬೆಳಗಾವಿ ತಲುಪಲಿದೆ. ಇದೇ ರೈಲು ಜ.28ರಂದು ಸಂಜೆ 5.15ಕ್ಕೆ ಬೆಳಗಾವಿಯಿಂದ ಹೊರಟು ಮುಂಜಾನೆ 5 ಗಂಟೆಗೆ ಯಶವಂತಪುರ ತಲುಪಲಿದೆ. ಎರಡೂ ರೈಲುಗಳು ಸಂಚಾರದ ವೇಳೆ ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಹಾವೇರಿ, ದಕ್ಷಿಣ ಹುಬ್ಬಳ್ಳಿ, ಹುಬ್ಬಳ್ಳಿ, ಧಾರವಾಡ, ಲೋಂಡದಲ್ಲಿ ನಿಂತು ಮುಂದೆ ಸಾಗಲಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.