
ಲಾಹೋರ್ (ಜು.24): ಪಂಜಾಬ್ ಪ್ರಾಂತ್ಯದ ಮುಖ್ಯಮಂತ್ರಿ ಶಹಬಾಜ್ ಶರೀಫ್ ಮನೆ ಸಮೀಪ ಆತ್ಮಹತ್ಯಾ ಸ್ಫೋಟ ಸಂಭವಿಸಿದ್ದು ಪೊಲೀಸರು ಸೇರಿದಂತೆ ಕನಿಷ್ಠ 20 ಮಂದಿ ಮೃತಪಟ್ಟಿದ್ದು, 30 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಪೊಲೀಸರನ್ನೇ ಗುರಿಯಾಗಿಟ್ಟುಕೊಂಡು ಆತ್ಮಹತ್ಯಾ ದಾಳಿ ನಡೆಸಲಾಗಿದೆ ಎಂದು ಲಾಹೋರ್ ಪೊಲೀಸರು ಹೇಳಿದ್ದಾರೆ.
ಮುಖ್ಯಮಂತ್ರಿ ಮನೆ ಸಮೀಪವಿರುವ ಇರ್ಫಾ ಕರೀಮ್ ಟವರ್ ಸುತ್ತಮುತ್ತ ಪೊಲೀಸರು ಹಾಗೂ ಲಾಹೋರ್ ಪ್ರಾಧಿಕಾರದ ಅಧಿಕಾರಿಗಳು ಸ್ಥಳದಲ್ಲಿ ಅತಿಕ್ರಮ ತೆರವುಗೊಳಿಸುತ್ತಿದ್ದ ವೇಳೆ ಬಾಂಬ್ ಸ್ಪೋಟ ಸಂಭವಿಸಿದೆ. ಗಾಯಗೊಂಡವರ ಸ್ಥಿತಿ ಗಂಭಿರವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
(ಸಾಂದರ್ಭಿಕ ಚಿತ್ರ)
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.