
ಬೆಂಗಳೂರು : ಸಾಲದ ಶೂಲಕ್ಕೆ ಸಿಲುಕಿ ರಾಜ್ಯದಲ್ಲಿ ಭಾನುವಾರ ಮತ್ತಿಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಮೂಲಕ ಕಳೆದ ಭಾನುವಾರದಿಂದ ಒಂದೇ ವಾರದಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತರ ಸಂಖ್ಯೆ 20ಕ್ಕೇರಿದೆ.
ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಪಿ. ಎನ್. ರವೀಂದ್ರ(33) ಹಾಗೂ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಕೆಂಗಟ್ಟೆ ಗ್ರಾಮದ ನಾಗರಾಜನಾಯ್ಕ(45) ಮೃತ ರೈತರು. ರವೀಂದ್ರ ಅವರು ಸಹಕಾರ ಸಂಘ ಸೇರಿ ವಿವಿಧೆಡೆ 7.4 ಲಕ್ಷ ಸಾಲ ಹೊಂದಿದ್ದರೆ, ನಾಗರಾಜನಾಯ್ಕ ಅವರು 6.2ಲಕ್ಷಕ್ಕೂ ಹೆಚ್ಚು ಸಾಲ ಮಾಡಿದ್ದರು.
ತೀವ್ರ ಸಾಲಬಾಧೆಯಿಂದ ನೊಂದು ಭಾನುವಾರ ಇಬ್ಬರೂ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜ್ಯದಲ್ಲಿ ಸಾಲದ ಶೂಲಕ್ಕೆ ಸಿಲುಕಿ ಕಳೆದ ಭಾನುವಾರದಿಂದ ಮಂಗಳವಾರದವರೆಗೆ 10 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು.
ಬುಧವಾರ ಪಿರಿಯಾಪಟ್ಟಣದ ಒಬ್ಬ ರೈತ, ಗುರುವಾರ, ಶುಕ್ರವಾರ ತಲಾ ಇಬ್ಬರು ರೈತರು ಹಾಗೂ ಶನಿವಾರ ಮೂವರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ ಭಾನುವಾರವೂ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಮೂಲಕ ಒಂದೇ ವಾರದಲ್ಲಿ 20 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.