
ಢಾಕಾ(ಡಿ.03): ಹಿಂದೂಗಳಿಗೆ ಸೇರಿದ 20 ಮನೆಗಳಿಗೆ ಬೆಂಕಿ ಹಚ್ಚಿರುವ ಘಟನೆ ಬಾಂಗ್ಲಾದೇಶದ ದಿನಜ್`ಪುರದ ಬೊಚಾಗಂಜ್ ಉಪಾಸಿಲಾದಲ್ಲಿ ನಡೆದಿದೆ. ರೈಲ್ವೆ ಕಾಲೋನಿಯ 7 ಕುಟುಂಬಗಳಿಗೆ ಸೇರಿದ ಮನೆ ಇವಾಗಿವೆ.
ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ, ಗಾಯ ಸಂಭವಿಸಿಲ್ಲ. ಬೆಂಕಿಯ ಸೂಚಬೆ ಅರಿತ ಜನ ಎಸ್ಕೇಪ್ ಆಗಿದ್ದಾರೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಬೆಂಕಿ ಹಚ್ಚಿದ ಜುವೆಲ್ ಎಂಬಾತನನ್ನ ಬಂಧಿಸಲಾಗಿದೆ.
ದುರ್ಗಾ ಪೂಜೆ ಸಂದರ್ಭ ಹಿಂದೂಗಳು ಮತ್ತು ಜುವೆಲ್ ನಡುವೆ ಜಗಳ ನಡೆದಿತ್ತು. ಅದನ್ನೇ ಮನಸ್ಸಿನಲ್ಲಿಟ್ಟುಕೊಂಡು ಬೆದರಿಸುತ್ತಿದ್ದ ಜುವೆಲ್, ಇದೀಗ ಈ ದುಷ್ಕೃತ್ಯ ಎಸಗಿದ್ದಾನೆ ಎಂದು ಸಂತ್ರಸ್ತರು ಆರೋಪಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.