‘ಆಡಳಿತ ಪಕ್ಷದ 20 ಶಾಸಕರಿಂದ ಅಸಮಾಧಾನ ಸ್ಫೋಟ’

Published : Jun 20, 2019, 12:18 PM IST
‘ಆಡಳಿತ ಪಕ್ಷದ 20 ಶಾಸಕರಿಂದ ಅಸಮಾಧಾನ ಸ್ಫೋಟ’

ಸಾರಾಂಶ

ಆಪರೇಷನ್ ಕಮಲದ ವಿಚಾರ ಕರ್ನಾಟಕ ರಾಜಕೀಯದಲ್ಲಿ ಸದಾ ಸುದ್ದಿಯಲ್ಲಿರುತ್ತದೆ.ಇದೀಗ ಪರಸ್ಪರ ವಾಕ್ಸಮರವೂ ಕೂಡ ಜೋರಾಗಿದೆ. ನಾಯಕರ ಜಟಾಪಟಿಗೆ ಕಾರಣವಾದ ವಿಚಾರವೀಗ ಎಲ್ಲಿಗೆ ಬಂದಿದೆ.?

ಬೆಂಗಳೂರು [ಜೂ.20] :  ‘ಆಪರೇಷನ್ ಕಮಲ’ ನಡೆಸುವ ಸಲುವಾಗಿ ಜೆಡಿಎಸ್ ಶಾಸಕರೊಬ್ಬರಿಗೆ ಬಿಜೆಪಿ ಮುಖಂಡರು 10 ಕೋಟಿ ರು.ಗಳ ಆಮಿಷ ಒಡ್ಡಿದ್ದಾರೆ ಎಂಬ ಮುಖ್ಯ ಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಆರೋಪವನ್ನು ಬಲವಾಗಿ ಅಲ್ಲಗಳೆದಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಅದಕ್ಕೆ ಸಂಬಂಧಪಟ್ಟ ವಿವರಗಳನ್ನು  ಒತ್ತಾಯಿಸಿದ್ದಾರೆ.

ಬುಧವಾರ ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಹತಾಶರಾಗಿ ಆಪರೇಷನ್ ಕಮಲದ ಆರೋಪ ಮಾಡುತ್ತಿದ್ದಾರೆ ಎಂದು ಹರಿಹಾಯ್ದರು. ಈ ರೀತಿ ಮನಸ್ಸಿಗೆ ಬಂದಂತೆ ಮಾತನಾಡುವ ಬದಲು ಜೆಡಿಎಸ್‌ನ ಯಾವ  ಶಾಸಕರಿಗೆ ಬಿಜೆಪಿಯ ಯಾವ ಮುಖಂಡರು ಆಮಿಷ ಒಡ್ಡಿದ್ದರು ಎಂಬುದನ್ನು ಬಹಿರಂಗಪಡಿಸಬೇಕು. ಹಾಗೆ ಮಾಡಿದರೆ ಅವರಿಗೆ ಗೌರವ ಬರುತ್ತದೆ. ಇಲ್ಲದಿದ್ದರೆ ತಮ್ಮ ಪಕ್ಷದ ಶಾಸಕರನ್ನು ತಾವೇ ಅನುಮಾನಪಟ್ಟು ಹರಾಜಿಗೆ ಇಟ್ಟಂತಾಗುತ್ತದೆ. ಅನಗತ್ಯವಾಗಿ ಯಾರೋ ಬಿಜೆಪಿಯವರು, ಯಾರೋ ಜೆಡಿಎಸ್ ಶಾಸಕರನ್ನು ಸಂಪರ್ಕಿಸಿ 10 ಕೋಟಿ ರು. ಆಮಿಷ ಒಡ್ಡಿದ್ದಾರೆ ಎಂದು ಹೇಳುವುದು ಅವರ ಸ್ಥಾನಕ್ಕೆ ಘನತೆ
ತರುವುದಿಲ್ಲ ಎಂದು ತೀಕ್ಷ್ಣವಾಗಿ ಹೇಳಿದರು.

ನಾವು ಸರ್ಕಾರವನ್ನು ಪತನಗೊಳಿಸುವ ಪ್ರಯತ್ನಕ್ಕೆ ಕೈಹಾಕುವುದಿಲ್ಲ ಎಂದು ಈಗಾಗಲೇ ಹಲವು ಬಾರಿ ಸ್ಪಷ್ಟಪಡಿಸಿದ್ದೇವೆ. ಆಡಳಿತಾರೂಢ ಪಕ್ಷದ 15ರಿಂದ 20 ಮಂದಿ  ಶಾಸಕರು ಅಸಮಾಧಾನಗೊಂಡಿದ್ದಾರೆ. ಅವರನ್ನು ಸರಿ ಮಾಡಿ ಕೊಂಡು ರಾಜ್ಯದ ಅಭಿವೃದ್ಧಿಯತ್ತ ಗಮನಹರಿಸಿ ಎಂಬ ಮಾತನ್ನು ನಾವು ಹೇಳುತ್ತಿದ್ದೇವೆ ಎಂದರು.

ಬಿಜೆಪಿ ಪ್ರತಿಪಕ್ಷವಾಗಿ ತನ್ನ ಕೆಲಸವನ್ನು ಮಾಡುತ್ತಿದೆ. ರಾಜ್ಯದ ಶೇ.80 ರಷ್ಟು ಭಾಗದಲ್ಲಿ ಮಳೆಯಾಗಿಲ್ಲ. ಬರ ಪರಿಹಾರ ಕಾಮಗಾರಿಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಮುಖ್ಯ ಮಂತ್ರಿಗಳು ಇಂಥ ಸುಳ್ಳು ಹೇಳಿಕೆಗಳನ್ನು ನೀಡುವ ಬದಲು ಬರ ಪರಿಹಾರ ಕಾಮಗಾರಿ ಕೈಗೊಳ್ಳುವುದೂ ಸೇರಿದಂತೆ ರಾಜ್ಯದ ಅಭಿವೃದ್ಧಿ ಕೆಲಸಗಳತ್ತ ಆದ್ಯತೆ ನೀಡಬೇಕಾಗಿದೆ ಎಂದು ಕಿವಿಮಾತು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?