20 ಸಾಧಕರಿಗೆ ಶೌರ್ಯ ಪ್ರಶಸ್ತಿ

Published : Jun 22, 2017, 11:03 AM ISTUpdated : Apr 11, 2018, 12:54 PM IST
20 ಸಾಧಕರಿಗೆ ಶೌರ್ಯ ಪ್ರಶಸ್ತಿ

ಸಾರಾಂಶ

ವಿಪತ್ತು ಒದಗಿದ ಸನ್ನಿವೇಶದಲ್ಲಿ ತಮ್ಮ ಜೀವದ ಹಂಗು ತೊರೆದು, ಆಪತ್ತಿಗೆ ಸಿಕ್ಕಿದವರನ್ನು ಕಾಪಾಡಿದ ಧೀರರನ್ನು ಗುರುತಿಸಿ ಸನ್ಮಾನಿಸಲು ಸುವರ್ಣ ನ್ಯೂಸ್‌- ಕನ್ನಡಪ್ರಭ ಸ್ಥಾಪಿಸಿರುವ ಶೌರ್ಯ ಪ್ರಶಸ್ತಿಗೆ ವಿಜೇತರನ್ನು ಆಯ್ಕೆ ಮಾಡಲಾಗಿದೆ.

ವಿಪತ್ತು ಒದಗಿದ ಸನ್ನಿವೇಶದಲ್ಲಿ ತಮ್ಮ ಜೀವದ ಹಂಗು ತೊರೆದು, ಆಪತ್ತಿಗೆ ಸಿಕ್ಕಿದವರನ್ನು ಕಾಪಾಡಿದ ಧೀರರನ್ನು ಗುರುತಿಸಿ ಸನ್ಮಾನಿಸಲು ಸುವರ್ಣ ನ್ಯೂಸ್‌- ಕನ್ನಡಪ್ರಭ ಸ್ಥಾಪಿಸಿರುವ ಶೌರ್ಯ ಪ್ರಶಸ್ತಿಗೆ ವಿಜೇತರನ್ನು ಆಯ್ಕೆ ಮಾಡಲಾಗಿದೆ.

ಜೂ.15ರಂದು ಬೆಂಗಳೂರಿನಲ್ಲಿ ತೀರ್ಪುಗಾರರಾದ ಖ್ಯಾತ ನಟ ದೇವರಾಜ್‌ ಹಾಗೂ ಕಾರ್ಗಿಲ್‌ ಯುದ್ಧ ಸೇನಾನಿ ಕ್ಯಾ|ನವೀನ್‌ ನಾಗಪ್ಪ ವಿಜೇತರ ಆಯ್ಕೆ ಮಾಡಿದ್ದಾರೆ.

70ಕ್ಕೂ ಅಧಿಕ ನಾಮನಿರ್ದೇಶನಗಳ ಪೈಕಿ ಪ್ರತಿ ಯೊಬ್ಬರ ಸಾಧನೆಯನ್ನು ಅಳೆದು ತೂಗಿ ವಿಜೇತರನ್ನು ಆರಿಸಲಾಗಿದೆ.

ಇಬ್ಬರು ಮರಣೋತ್ತರ ಪುರಸ್ಕೃತರೂ ಸೇರಿದಂತೆ 20 ಶೂರರನ್ನು ಪ್ರಶಸ್ತಿಗೆ ಆರಿಸಲಾಗಿದೆ. ಪ್ರಶಸ್ತಿ ವಿಜೇತರ ಸಂಪೂರ್ಣ ವಿವರವನ್ನು ಇಂದಿನ ಸಂಚಿಕೆ ಜತೆಗಿರುವ ‘ಇಂದಿನ ಸ್ಪೆಷಲ್‌' ಪುರವಣಿಯಲ್ಲಿ ಪ್ರಕಟಿಸಲಾಗಿದೆ.

ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡುವ ಸಮಾರಂಭ ಇದೇ ಜೂ.23ರ ಶುಕ್ರವಾರ ಸಂಜೆ 5 ಗಂಟೆಗೆ ಬೆಂಗಳೂರಿನ ಪುರಭವನದಲ್ಲಿ ನಡೆಯಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಮತ್ತು ಬೆಳಗಾವಿ ವಿಭಜನೆ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಮಾಹಿತಿ
ದೇವರ ದರ್ಶನ ಮುಗಿಸಿ ಬೆಂಗಳೂರಿಗೆ ಮರಳುತ್ತಿದ್ದ ಬಸ್ ಮಂಡ್ಯ ಬಳಿ ಪಲ್ಟಿ, 8 ಮಂದಿಗೆ ಗಾಯ