ವಾಜಪೇಯಿ ಸರ್ಕಾರ ಕೆಡವಿದ್ದ ಜಯಾ ಪಕ್ಷಕ್ಕೆ 20 ವರ್ಷದ ನಂತ್ರ ಬಿಗ್ ಗಿಫ್ಟ್!

Published : May 30, 2019, 04:42 PM ISTUpdated : May 30, 2019, 04:59 PM IST
ವಾಜಪೇಯಿ ಸರ್ಕಾರ ಕೆಡವಿದ್ದ ಜಯಾ ಪಕ್ಷಕ್ಕೆ 20 ವರ್ಷದ ನಂತ್ರ  ಬಿಗ್ ಗಿಫ್ಟ್!

ಸಾರಾಂಶ

ಕಾಲ ಚಕ್ರ ತಿರುಗುತ್ತದೆ, ಇತಿಹಾಸ ಮತ್ತೆ ಪುನರಾವರ್ತನೆಯಾಗುತ್ತದೆ ಎಂಬೆಲ್ಲ ಮಾತುಗಳಿಗೆ ಈ ಬಾರಿಯ ಮೋದಿ ಪ್ರಮಾಣ ಸಾಕ್ಷಿಯಾಗುತ್ತಿದೆ.

ಬೆಂಗಳೂರು(ಮೇ. 30) ಲೋಕಸಭಾ ಚುನಾವಣಾ ಫಲಿತಾಂಶಕ್ಕೆ ಸಂಬಂಧಿಸಿ ಹೇಳುವುದಾದರೆ ತಮಿಳುನಾಡಿನ ಎಐಎಡಿಎಂಕೆ ಗೆ ಅಂಥ ಹೇಳಿಕೊಳ್ಳುವಂಥ ಸಾಧನೆ ಮಾಡಿದ ತೃಪ್ತಿ ಏನಿಲ್ಲ. ಆದರೂ ಮೋದಿ ಸಂಪುಟದಲ್ಲಿ ಸಚಿವ ಸ್ಥಾನ ಖಾತ್ರಿಯಾಗಿದೆ.

ತಮಿಳುನಾಡು ಉಪಮುಖ್ಯಮಂತ್ರಿ ಒ ಪನ್ನೀರ್ ಸೆಲ್ವಂ ಅವರ ಪುತ್ರ ಒಪಿ ರವೀಂದ್ರನಾಥ್ ಕುಮಾರ್ ಏಕೈಕ ಎಂಪಿಯಾಗಿ ಎನ್ ಡಿಎ ಒಕ್ಕೂಟದಿಂದ ಗೆದ್ದುಬಂದಿದ್ದಾರೆ. 

ಮೋದಿ ಪ್ರಮಾಣಕ್ಕೆ ಬಾಲಿವುಡ್ ದಂಡು 

ತಮಿಳುನಾಡಿನ ಥೇನಿ ಕ್ಷೇತ್ರದಿಂದ ಸ್ಫರ್ಧೆ ಮಾಡಿ 53000 ಮತಗಳ ಅಂತರದಲ್ಲಿ ಜಯ ಸಾಧಿಸಿದ್ದರು. ಎಐಎಡಿಎಂಕೆ ರಾಜ್ಯಸಭಾ ಸದಸ್ಯ ಆರ್ ವೈತಿಲಿಂಗಮ್ ಮತ್ತು ರವೀಂದ್ರನಾಥ್ ನಡುವೆ ಸಚಿವ ಸ್ಥಾನಕ್ಕೆ ಪೈಪೋಟಿ ಕಂಡುಬಂದಿದ್ದರೂ ಅಂತಿಮವಾಗಿ ಪನ್ನೀರ್ ಸೆಲ್ವಂ ಅವರ ಪುತ್ರ ಪ್ರಮಾಣ ತೆಗೆದುಕೊಳ್ಳುವುದು ಪಕ್ಕಾ ಆಗಿದೆ.

ಸುಮಾರು 20  ವರ್ಷಗಳ ನಂತರ ಅಂದರೆ 1998ರಲ್ಲಿ ವಾಜಪೇಯಿ ಸರಕಾರದಲ್ಲಿ ಎಐಎಡಿಎಂಕೆ ಕೇಂದ್ರದಲ್ಲಿ ಸಚಿವ ಸ್ಥಾನ ಪಡೆದುಕೊಂಡಿತ್ತು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪಾಲಿಕೆ ಚುನಾವಣೆಯಲ್ಲಿ ರಾಜ್ ಠಾಕ್ರೆಗೆ ಮುಖಭಂಗ? 'ರಸಮಲೈ' ವ್ಯಂಗ್ಯಕ್ಕೆ ಅಣ್ಣಾಮಲೈ ಕೊಟ್ಟ ತಿರುಗೇಟು ಹೇಗಿದೆ ಗೊತ್ತಾ?
ಕಸದ ರಾಶಿಯಿಂದ ಹತ್ತಿಕೊಂಡ ಬೆಂಕಿ ನೀಲಗಿರಿ ತೋಪಿಗೆ ; ಸ್ಥಳೀಯರ ಸಾಹಸದಿಂದ ತಪ್ಪಿದ ಭಾರಿ ಅನಾಹುತ!