‘ಕೈ’ ಬಿಟ್ಟು ಬಿಜೆಪಿ ಸೇರಿದ 2000 ಕಾರ್ಯಕರ್ತರು

Published : Jun 10, 2018, 02:58 PM IST
‘ಕೈ’ ಬಿಟ್ಟು ಬಿಜೆಪಿ ಸೇರಿದ 2000 ಕಾರ್ಯಕರ್ತರು

ಸಾರಾಂಶ

ಕಾಂಗ್ರೆಸ್ ಪಕ್ಷವನ್ನು ತೊರೆದು 2000 ಮಂದಿ ಕಾರ್ಯಕರ್ತರು ಇಂದು ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. 

ಒಡಿಶಾ : ಕಾಂಗ್ರೆಸ್ ಹಾಗೂ ಬಿಜು ಜನತಾ ದಳ ತೊರೆದು 2000 ಮಂದಿ ಕಾರ್ಯಕರ್ತರು ಇಂದು ಬಿಜೆಪಿ ಸೇರ್ಪಡೆಯಾಗಿದ್ದಾರೆ. 

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ನೇತೃತ್ವದಲ್ಲಿ ಇಂದು ಒಡಿಶಾದ ಬರಂಬಾ ಬ್ಲಾಕ್ ಪ್ರದೇಶದಲ್ಲಿ ಪಕ್ಷವನ್ನು ಅಧಿಕೃತವಾಗಿ ಸೇರಿದ್ದಾರೆ. 

ಅಲ್ಲದೇ ಮಾಜಿ ಐಎಎಸ್ ಅಧಿಕಾರಿ ಅಶೀಕ್ ಕುಮಾರ್ ತ್ರಿಪಾಟಿ ಅವರೂ ಕೂಡ ಬಿಜೆಪಿಯಿಂದ ಏರ್ಪಡಿಸಲಾಗಿದ್ದ ವಿಶೇಷ ಕಾರ್ಯಕ್ರಮದ ವೇಳೆಯೇ ಪಕ್ಷವನ್ನು ಸೇರಿದರು. 

ಇನ್ನು ಈ ವೇಳೆ ಮಾತನಾಡಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಎಲ್ಲರನ್ನೂ ಕೂಡ ಆತ್ಮೀಯವಾಗಿ ತಮ್ಮ ಪಕ್ಷಕ್ಕೆ ಆಹ್ವಾನಿಸಿದ್ದಾರೆ. 

ಅಲ್ಲದೇ ತ್ರಿಪಾಟಿ ಹಾಗೂ ಕಾರ್ಯಕರ್ತರ ಸೇರ್ಪಡೆಯಿಂದ ಪಕ್ಷಕ್ಕೆ ಇನ್ನಷ್ಟು ಬಲ ದೊರಕಲಿದೆ ಎಂದು ಧರ್ಮೇಂದ್ರ ಪ್ರಧಾನ್ ಈ ವೇಳೆ ಹೇಳಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದೇಶದ ಮೊದಲ ಹೈಡ್ರೋಜನ್‌ ಚಾಲಿತ ವಾಟರ್‌ ಟ್ಯಾಕ್ಸಿ ವಾರಾಣಸಿಯಲ್ಲಿ ಶುರು
ಎಐ ನಿರ್ಮಾತೃಗಳಿಗೆ 2025ರ ಟೈಮ್ ವರ್ಷದ ವ್ಯಕ್ತಿ ಗೌರವ!