
ನವದೆಹಲಿ(ಜ.25): ಈ ವರ್ಷದ ಪದ್ಮ ಪ್ರಶಸ್ತಿಗಳನ್ನು ಕೇಂದ್ರ ಸರ್ಕಾರ ಪ್ರಕಟಿಸಿದ್ದು ತಮ್ಮ ಜೀವಮಾನದಲ್ಲಿ 15 ಸಾವಿರಕ್ಕೂ ಹೆಚ್ಚು ಉಚಿತ ಹೆರಿಗೆ ಮಾಡಿಸಿರುವ ತುಮಕೂರಿನ ಪಾವಗಡದ ಸೂಲಗಿತ್ತಿ ನರಸಮ್ಮಗೆ ಪದ್ಮಶ್ರೀ ಪ್ರಶಸ್ತಿ ನೀಡಲಾಗಿದೆ.
ಇನ್ನುಳಿದಂತೆ ಕನ್ನಡ ಸೇರಿದಂತೆ ಭಾರತದ ಹಲವು ಭಾಷೆಗಳಿಗೆ ಸಂಗೀತ ನೀಡಿರುವ ಸಂಗೀತ ರತ್ನ ಎಂದೇ ಖ್ಯಾತಿಗಳಿಸಿರುವ ಇಳಯರಾಜ ಅವರಿಗೆ ಪದ್ಮಭೂಷಣ ಪ್ರಶಸ್ತಿ ಗೌರವಿಸಲಾಗಿದೆ.
ಅರವಿಂದ ಗುಪ್ತ - ವಿಜ್ಞಾನ ಕ್ಷೇತ್ರ,ಎಸ್. ಬಿಸ್ವಾಸ್ - ಹಿರಿಯ ಸ್ವಾತಂತ್ರ್ಯ ಹೋರಾಟಗಾರರು, ಭಜ್ಜು ಶ್ಯಾಮ್ - ಗೊಂಡ ಕಲಾವಿದ, ಲಕ್ಷ್ಮಿ ಕುಟ್ಟಿ - ಗಿಡಮೂಲಿಕೆ ಔಷಧ ಕ್ಷೇತ್ರ, ಎಂ.ಆರ್. ರಾಜಗೋಪಾಲ್ - ವೈದ್ಯಕೀಯ ಕ್ಷೇತ್ರ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.