
ರಾಯಚೂರು (ಡಿ.17): ಮುಂದಿನ ವಿಧಾನಸಭೆ ಚುನಾವಣೆಯೇ ನನ್ನ ಕೊನೇ ಚುನಾವಣೆ. ಆ ನಂತರ ಮತ್ತೆ ಸ್ಪರ್ಧಿಸುವುದಿಲ್ಲ. ಆದರೆ ರಾಜಕೀಯದಲ್ಲಿ ಸಕ್ರಿಯವಾಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಯರಮರಸ್ ಅತಿಥಿ ಗೃಹದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಈ ಹಿಂದೆಯೇ ನಿವೃತ್ತಿ ಪಡೆಯಬೇಕು ಎಂದು ನಿರ್ಧಾರ ತೆಗೆದುಕೊಂಡಿದ್ದೆ. ಆದರೆ, ಬಿಜೆಪಿಯವರ ಕೋಮು ಪ್ರಚೋದನೆಗೆ ಕಡಿವಾಣ ಹಾಕಬೇಕೆಂದು ಪುನಃ ಸ್ಪರ್ಧಿಸಲು ನಿರ್ಧರಿಸಿದ್ದೇನೆ.
ಮುಂದಿನ ಚುನಾವಣೆ ಬಳಿಕ ಮತ್ತೆ ಸ್ಪರ್ಧಿಸುವುದಿಲ್ಲ. ಆದರೆ, ರಾಜಕೀಯದಲ್ಲಿ ಸಕ್ರಿಯವಾಗಿರುತ್ತೇನೆ. ವರುಣಾದಿಂದ ನಿಂತರೆ ಹಿನ್ನಡೆಯಾಗುತ್ತದೆ ಎಂಬುದೆಲ್ಲಾ ಸುಳ್ಳು. ರಾಜ್ಯದ 20 ಕ್ಷೇತ್ರಗಳಲ್ಲಿ ನಿಂತು ಗೆಲ್ಲಬಲ್ಲೆ. ಇದು ನನ್ನ ಕೊನೇ ಚುನಾವಣೆಯಾದ ಕಾರಣ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.