ಖಾಸಗಿ ಬಸ್ ಅಪಘಾತ: 21 ಮಂದಿ ಬಲಿ, ಹಲವರಿಗೆ ಗಂಭೀರ ಗಾಯ!

Published : Oct 01, 2019, 03:00 PM IST
ಖಾಸಗಿ ಬಸ್ ಅಪಘಾತ: 21 ಮಂದಿ ಬಲಿ, ಹಲವರಿಗೆ ಗಂಭೀರ ಗಾಯ!

ಸಾರಾಂಶ

ಖಾಸಗಿ ಬಸ್ ಅಪಘಾತ, 21 ಮಂದಿ ಸಾವು 50ಕ್ಕೂ ಅಧಿಕ ಮಂದಿಗೆ ಗಾಯ| ನಿಯಂತ್ರಣ ಕಳೆದುಕೊಂಡ ಚಾಲಕ, ಉರುಳಿ ಬಿದ್ದ ಬಸ್| ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ಗಾಂಧೀನಗರ[ಅ.01]: ಉತ್ತರ ಗುಜರಾತ್​ನ ಬನಸ್ಕಾಂತ ಬಳಿ 70 ಮಂದಿ ಪ್ರಯಾಣಿಕರಿದ್ದ ಖಾಸಗಿ ಬಸ್ ಉರುಳಿಬಿದ್ದ ಪರಿಣಾಮ 21 ಮಂದಿ ಸಾವನ್ನಪ್ಪಿರುವ ಘಟನೆ  ಘಟನೆ ಸೋಮವಾರ ನಡೆದಿದೆ.  ಈ ಭೀಕರ ಅಪಘಾತದಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿವೆ.

ಬನಸ್ಕಾಂತ ಜಿಲ್ಲೆಯ ಅಂಬಾಜಿ ನಗರದ, ಅಂಬಾಜಿ ದಾಂತಾ ಮಾರ್ಗದ ಗುಡ್ಡಗಾಡು ರಸ್ತೆಯಾದ ತ್ರಿಶುಲಿಯಾ ಘಾಟ್ ನಲ್ಲಿ ಈ ಭತಯಾನಕ ಅಪಘಾತ ಸಂಭವಿಸಿದೆ. ಅಪಘಾತದ ಕುರಿತು ಮಾಹಿತಿ ನೀಡಿರುವ ಬನಸ್ಕಾಂತ ಜಿಲ್ಲೆಯ ಪೊಲೀಸ್ ಕಮಿಷನರ್ 'ಖಾಸಗಿ ಬಸ್ ನ್ಲಲಿ ಸುಮಾರು 70 ಮಂದಿ ಪ್ರಯಾಣಿಸುತ್ತಿದ್ದರು. ಈ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದ್ದ ಪರಿಣಾಮ ನಿಯಂತ್ರಣ ಕಳೆದುಕೊಂಡು ಬಸ್ ಉರುಳಿ ಬಿದ್ದಿದೆ' ಎಂದಿದ್ದಾರೆ.

ಪ್ರಧಾನಿ ಮೋದಿ ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ. 'ಭೀಕರ ಅಪಘಾತದ ಸುದ್ದಿ ಕೇಳಿ ಆಘಾತವಾಯ್ತು. ಈ ದುರ್ಘಟನೆಯಲ್ಲಿ ಸಾವನ್ನಪ್ಪಿರುವವ ಕುರಿತು ಬಹಳ ನೋವಾಗಿದೆ. ಮೃತರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿಯನ್ನು ಆ ಭಗವಂತ ಕರುಣಿಸಲಿ. ಘಟನೆಯಲ್ಲಿ ಗಾಯಗೊಂಡವರಿಗೆ ಎಲ್ಲಾ ಸವಲತ್ತುಗಳನ್ನು ಸ್ಥಳೀಯ ಆಡಳಿತ ಒದಗಿಸಲಿ' ಎಂದಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನನಗೂ ಸಿಎಂ ಆಗುವ ಆಸೆ ಇದೆ, ಹೈಕಮಾಂಡ್ ನಿರ್ಧಾರ ಅಂತಿಮ: ದಿನೇಶ್‌ ಗುಂಡೂರಾವ್
Karnataka News Live: Aadi Lakshmi Purana Serial - ವಿರುದ್ಧ ದಿಕ್ಕಿನಲ್ಲಿ ಸಾಗುವ, ಒಬ್ಬರನ್ನೊಬ್ಬರು ಕಂಡರೆ ಆಗದವ್ರು ಮದುವೆಯಾಗುವ ಕಥೆ