
ಲಖನೌ (ಡಿ.28): ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ 22 ವರ್ಷಗಳ ಹಿಂದೆ ದಾಖಲಾಗಿದ್ದ ಪ್ರಕರಣವನ್ನು ಅವರದ್ದೇ ನೇತೃತ್ವದ ರಾಜ್ಯ ಸರ್ಕಾರ ವಾಪಸ್ ಪಡೆದಿದೆ.
ಇದರಿಂದಾಗಿ ಆದಿತ್ಯನಾಥ್ ಅವರು ತಮಗೆ ತಾವೇ ಕ್ಲೀನ್ ಚಿಟ್ ಪಡೆದುಕೊಂಡಂತಾಗಿದೆ. ರಾಜಕೀಯ ನಾಯಕರ ವಿರುದ್ಧದ ಗಂಭೀರವಲ್ಲದ ಪ್ರಕರಣ ವಾಪಸ್ ಪಡೆಯಲು ಇತ್ತೀಚೆಗೆ ‘ಉ. ಪ್ರ. ಕ್ರಿಮಿನಲ್ ತಿದ್ದುಪಡಿ ಕಾಯ್ದೆ-2017’ ಅಂಗೀಕರಿಸಲಾಗಿತ್ತು.
ಗಂಭೀರವಲ್ಲದ 20 ಸಾವಿರ ಪ್ರಕರಣಗಳನ್ನು ರದ್ದು ಮಾಡಲು ಈ ಕಾಯ್ದೆ ರೂಪಿಸಲಾಗಿತ್ತು. ಆ ಪ್ರಕಾರ, ಯೋಗಿ ನಿಷೇಧಾಜ್ಞೆ ಉಲ್ಲಂಘಿಸಿ ಭಾಷಣ ಮಾಡಿದ 22 ವರ್ಷದ ಹಳೆಯ ಪ್ರಕರಣವನ್ನು ಈಗ ರದ್ದು ಮಾಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.