
ಬೆಂಗಳೂರು(ಅ.17): ಕಟ್ಟಡ ಕುಸಿದು 7 ಮಂದಿ ಮೃತರಾದ ಕಹಿ ನೆನಪು ಮಾಸುವ ಮುನ್ನವೇ ಬೆಂಗಳೂರಲ್ಲಿ ಮತ್ತೊಂದು ಕಟ್ಟಡ ಕುಸಿದಿದೆ. ಆದ್ರೆ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಯಶವಂತಪುರದ ವಾರ್ಡ್ ನಂ-37 ರಲ್ಲಿ 25ವರ್ಷಗಳ ಹಳೆ ಕಟ್ಟಡ ಕುಸಿದು ಆತಂಕ ಸೃಷ್ಟಿಯಾಗಿತ್ತು. ಚಿಕ್ಕರಾಮಣ್ಣ ಎಂಬುವರಿಗೆ ಸೇರಿದ ಕಟ್ಟಡ ಕಳೆದ ಎರಡು ತಿಂಗಳಿಂದ ಸುರಿದ ಭಾರಿ ಮಳೆಗೆ ಶಿಥಿಲಗೊಂಡು ಕುಸಿದಿದೆ.
ಹಳೆ ಕಟ್ಟಡದಲ್ಲಿ ಕೆಳಗಡೆ ಎರಡು ಅಂಗಡಿಗಳನ್ನ, ಮೇಲೆ ಒಂದು ಮನೆಯನ್ನ ಬಾಡಿಗೆಗೆ ನೀಡಲಾಗಿತ್ತು. ಸಹಜವಾಗಿ ದಿನಸಿ ಅಂಗಡಿಯಾಗಿದ್ದರಿಂದ ಇಲಿ-ಹೆಗ್ಗಣ ತಳಹದಿಯಲ್ಲಿ ಬಿಲಗಳನ್ನ ಮಾಡಿಕೊಂಡಿದ್ದವು. ಬಿಲಗಳಲ್ಲಿ ನೀರು ನುಗ್ಗಿ ತಳಹದಿ ಕುಸಿದ ಪರಿಣಾಮ ಬಿಲ್ಡಿಂಗ್ ಎರಡು ಅಡಿಗಳಷ್ಟು ವಾಲಿದೆ. ಮೇಲೆ ಬಾಡಿಗೆ ಮನೆಯಲ್ಲಿದ್ದ ಟಿವಿ, ಫ್ರಿಡ್ಜ್ ಹಾಗು ಗೃಹೋಪಯೋಗಿ ವಸ್ತುಗಳು ನಾಶವಾಗಿವೆ.
ಘಟನೆ ಸಂಭವಿಸುತ್ತಿದ್ದಂತೆ ಸ್ಥಳಕ್ಕೆ ಸ್ಥಳೀಯ ಕಾರ್ಪೊರೇಟರ್ ಬಿ.ಕೆ.ವೆಂಕಟೇಶ್ ಮತ್ತು ಬಿಬಿಎಂಪಿ.ಎಇಇ ಉಮೇಶ್, ಯಶವಂತಪುರ ಪೊಲೀಸರು ಭೇಟಿ ನೀಡಿ ಪರಿಶೀಲಿನೆ ನಡೆಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.