
ಶ್ರೀನಗರ [ಆ.02]: ಇತ್ತಿಚೆಗಷ್ಟೇ ಜಮ್ಮು- ಕಾಶ್ಮೀರದಲ್ಲಿ ಹೆಚ್ಚುವರಿ ಭದ್ರತೆಗಾಗಿ 10 ಸಾವಿರ ಯೋಧರನ್ನು ಕಳುಹಿಸಿಕೊಟ್ಟಿದ್ದ ಕೇಂದ್ರ ಸರ್ಕಾರ ಇದೀಗ 25,000ಕ್ಕೂ ಹೆಚ್ಚು ಅರೆ ಸೇನಾ ಪಡೆಯ ಸಿಬ್ಬಂದಿಯನ್ನು ಕಳುಹಿಸಿಕೊಟ್ಟಿದೆ.
ಗುರುವಾರ ಮುಂಜಾನೆಯಿಂದ ಸೇನಾ ತುಕಡಿಗಳು ಆಗಮಿಸುತ್ತಿದ್ದು, ವಿವಿಧ ಭಾಗಗಳಿಗೆ ನಿಯೋಜಿಸಲಾಗುತ್ತಿದೆ. ಕಾನೂನು ಸುವ್ಯವಸ್ಥೆ ಹಾಗೂ ಭದ್ರತಾ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಡಿಢೀರನೆ ಅತಿಯಾದ ಸೇನಾ ಜಮಾವಣೆ ಕಾಶ್ಮೀರದಲ್ಲಿ ಹಲವಾರು ಅನುಮಾನಗಳಿಗೆ ಕಾರಣವಾಗಿದೆ.
ಇತ್ತೀಚೆಗಷ್ಟೇ ಬಿಜೆಪಿ ನಾಯಕರು ಜಮ್ಮು ಮತ್ತು ಕಾಶ್ಮೀರದಲ್ಲಿ ಪಕ್ಷದ ನಾಯಕರನ್ನು ದೆಹಲಿಗೆ ಕರೆಸಿಕೊಂಡು ವಿಸ್ತೃತ ಚರ್ಚೆ ನಡೆಸಿದ್ದಾರೆ. ಈ ಸಭೆಯಲ್ಲಿ ಚರ್ಚಿಸಲಾದ ಅಂಶಗಳು ಬಹಿರಂಗವಾಗಿಲ್ಲವಾದರೂ, ಸಭೆಯಲ್ಲಿ ಕೈಗೊಂಡ ನಿರ್ಧಾರಗಳನ್ನು ಆ.15ರ ಬಳಿಕ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಆ.15ಕ್ಕೆ ಅಮರನಾಥ ಯಾಥ್ರೆ ಮುಕ್ತಾಯಗೊಳ್ಳಲಿದ್ದು, ಬಳಿಕ ಕೇಂದ್ರದಿಂದ ದೊಡ್ಡ ಮಟ್ಟದ ನಿರ್ಧಾರ ಹೊರಬೀಳುವ ನಿರೀಕ್ಷೆ ಇದೆ.
- ರಾಜ್ಯವನ್ನು ಮೂರು ವಿಭಾಗಗಳನ್ನಾಗಿ ವಿಂಗಡಿಸಿ ಚುನಾವಣೆ ನಡೆಸುವ ಸಾಧ್ಯತೆ
- ಕಾಶ್ಮೀರದ ಜನರಿಗೆ ವಿಶೇಷ ಸೌಲಭ್ಯ ನೀಡುವ ಸಂವಿಧಾನದ ಪರಿಚ್ಛೇದ 35ಎ ರದ್ದು
- ಜಮ್ಮು- ಕಾಶ್ಮೀರಕ್ಕೆ ಸ್ವಾಯತ್ತ ಸ್ಥಾನಮಾನ ನೀಡುವ 370ನೇ ವಿಧಿ ರದ್ದು ಸಾಧ್ಯತೆ
- ಜಮ್ಮು-ಕಾಶ್ಮೀರದಲ್ಲಿ ಅಕ್ಟೋಬರ್- ಸೆಪ್ಟೆಂಬರ್ನಲ್ಲಿ ಚುನಾವಣೆ ಘೋಷಣೆ ಹಿನ್ನೆಲೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.