26/11 ಮುಂಬೈ ದಾಳಿ: ಹುತಾತ್ಮರ ಕುಟುಂಬಕ್ಕೆ ಎಂಪಿ ರಾಜೀವ್ ಚಂದ್ರಶೇಖರ್ ನೆರವು!

By Web DeskFirst Published Nov 27, 2018, 4:11 PM IST
Highlights

ಮುಂಬೈ ಭಯೋತ್ಪಾದಕ ದಾಳಿಗೆ ಬರೋಬ್ಬರಿ 10 ವರ್ಷ! ಮುಂಬೈ ದಾಳಿಯ ಹುತಾತ್ಮರನ್ನು ನೆನೆದು ಕಣ್ಣೀರಿಟ್ಟ ದೇಶ! ಹುತಾತ್ಮರ ಕುಟುಂಬಸ್ಥರಿಗೆ ಫ್ಲ್ಯಾಗ್ ಆಫ್ ಆನರ್ ಸಂಸ್ಥೆ ನೆರವು! ಸಂಸದ ರಾಜೀವ್ ಚಂದ್ರಶೇಖರ್ ನೇತೃತ್ವದ ಫ್ಲ್ಯಾಗ್ ಆಫ್ ಆನರ್ ಸಂಸ್ಥೆ! ಹುತಾತ್ಮ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಕುಟುಂಬಸ್ಥರಿಗೆ 25ಲಕ್ಷ ರೂ. ಧನಸಹಾಯ

ಬೆಂಗಳೂರು(ನ.27): ಮುಂಬೈ ಭಯೋತ್ಪಾದಕ ದಾಳಿಗೆ 10 ವರ್ಷ ಸಂದಿದೆ. ಈ ಮಧ್ಯೆ ಇಡೀ ದೇಶ ದಾಳಿಯಲ್ಲಿ ಹುತಾತ್ಮರಾದ ಪೊಲೀಸರು ಮತ್ತು ಸೈನಿಕರನ್ನು ನೆನೆದು ಗದ್ಗದಿತವಾಗಿದೆ.

ದೇಶ ರಕ್ಷಣೆಯಲ್ಲಿ ಹುತಾತ್ಮರಾದ ಭದ್ರತಾಪಡೆಗಳ ಕುಟುಂಬಸ್ಥರ ನೆರವಿಗಾಗಿ ಸಂಸದ ರಾಜೀವ್ ಚಂದ್ರಶೇಖರ್ 'ಫ್ಲ್ಯಾಗ್ಸ್ ಆಫ್ ಆನರ್' ಎಂಬ ಸಂಸ್ಥೆ ಪ್ರಾರಂಭಿಸಿದ್ದು, ಮುಂಬೈ ದಾಳಿಯಲ್ಲಿ ಹುತಾತ್ಮರಾದ ಪೊಲೀಸರು ಮತ್ತು ಸೈನಿಕರ ಕುಟುಂಬಸ್ಥರಿಗೆ ಈ ಸಂಸ್ಥೆ ವತಿಯಿಂದ ನೆರವು ನೀಡಲಾಯಿತು.

ಮುಂಬೈ ದಾಳಿಯಲ್ಲಿ ಹುತಾತ್ಮರಾದ ವೀರ ಸೈನಿಕ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಕುಟುಂಬಸ್ಥರಿಗೆ ಈ ವೇಳೆ ಸಂಸದ ರಾಜೀವ್ ಚಂದ್ರಶೇಖರ್ ಫ್ಲ್ಯಾಗ್ಸ್ ಆಫ್ ಆನರ್ ಸಂಸ್ಥೆ ವತಿಯಿಂದ 25 ಲಕ್ಷ ರೂ. ಆರ್ಥಿಕ ಸಹಾಯ ಮಾಡಿದರು.

ಇನ್ನು ಫ್ಯಾಗ್ಸ್ ಆಫ್ ಆನರ್ ಸಂಸ್ಥೆ ವತಿಯಿಂದ ನೀಡಲಾಗಿರುವ ಆರ್ಥಿಕ ಸಹಾಯದಲ್ಲಿ, ದೇಶಕ್ಕಾಗಿ ಹುತಾತ್ಮರಾದ ವೀರ ಸೈನಿಕರ ಕುಟುಂಬಸ್ಥರ ನೆರವಿಗಾಗಿ ಬರುವ ವಾಗ್ದಾನವನ್ನು ಸಂದೀಪ್ ಉನ್ನಿ ಕೃಷ್ಣನ್ ಕುಟುಂಬ ಮಾಡಿದೆ.

ಈ ಕುರಿತು ಫೇಸ್‌ಬುಕ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಂಸದ ರಾಜೀವ್ ಚಂದ್ರಶೇಖರ್, ಮುಂಬೈ ದಾಳಿಯ ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಅಲ್ಲದೇ ಭವಿಷ್ಯದಲ್ಲಿ ಇಂತಹ ಘಟನೆಗಳು ಜರುಗಿದಾಗ ಸರ್ಕಾರದ ಹೇಗೆ ಸನ್ನದ್ಧವಾಗಲಿದೆ ಎಂಬ ಕುರಿತು ರಾಜೀವ್ ಕೆಲವು ಪ್ರಶ್ನೆಗಳನ್ನು ಕೇಳಿದ್ದಾರೆ.

ಇನ್ನು ಫ್ಲ್ಯಾಗ್ಸ್ ಆಫ್ ಆನರ್ ಸಂಸ್ಥೆಯಡಿಯಲ್ಲಿ ಸಂಸದ ರಾಜೀವ್ ಚಂದ್ರಶೇಖರ್ ಅವರ ಕಾರ್ಯವನ್ನು ಎಲ್ಲರೂ ಶ್ಲಾಘಿಸಿದ್ದು, ಈ ಕಾರ್ಯ ಮುಂದುವರೆಯಲಿ ಎಂದು ಹಾರೈಸಿದ್ದಾರೆ.

click me!