ಧೂಳಿನ ಬಿರುಗಾಳಿ : 26 ಜನ ದುರ್ಮರಣ

First Published Jun 10, 2018, 7:50 AM IST
Highlights

 ಉತ್ತರ ಪ್ರದೇಶದ ವಿವಿಧ ಭಾಗಗಳಲ್ಲಿ ಅಪ್ಪಳಿಸಿದ ಧೂಳಿನ ಬಿರುಗಾಳಿ ಮತ್ತು ಮಿಂಚಿಗೆ 26 ಮಂದಿ ಬಲಿಯಾಗಿದ್ದಾರೆ. ಶುಕ್ರವಾರ ರಾತ್ರಿಯಿಂದ ಆರಂಭವಾಗಿರುವ ಧೂಳಿನ ಬಿರುಗಾಳಿ ಮತ್ತು ಮಿಂಚಿನಿಂದಾಗಿ ರಾಜ್ಯದ 11 ಜಿಲ್ಲೆಗಳು ತತ್ತರಿಸಿವೆ. 

ಲಖನೌ: ಉತ್ತರ ಪ್ರದೇಶದ ವಿವಿಧ ಭಾಗಗಳಲ್ಲಿ ಅಪ್ಪಳಿಸಿದ ಧೂಳಿನ ಬಿರುಗಾಳಿ ಮತ್ತು ಮಿಂಚಿಗೆ 26 ಮಂದಿ ಬಲಿಯಾಗಿದ್ದಾರೆ. ಶುಕ್ರವಾರ ರಾತ್ರಿಯಿಂದ ಆರಂಭವಾಗಿರುವ ಧೂಳಿನ ಬಿರುಗಾಳಿ ಮತ್ತು ಮಿಂಚಿನಿಂದಾಗಿ ರಾಜ್ಯದ 11 ಜಿಲ್ಲೆಗಳು ತತ್ತರಿಸಿವೆ. 

ಈ ನಡುವೆ, ಧೂಳಿನ ಬಿರುಗಾಳಿಯಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ತತ್‌ಕ್ಷಣವೇ ಪರಿಹಾರ ಒದಗಿಸಬೇಕು. ಅಲ್ಲದೆ, ರಕ್ಷಣೆಗೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ಆಯಾ ಜಿಲ್ಲಾಧಿಕಾರಿಗಳು ಕೈಗೊಳ್ಳಬೇಕು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ನಿರ್ದೇಶಿಸಿದ್ದಾರೆ. 

ಈ ನಡುವೆ, ಇಂಥದ್ದೇ ವಾತಾವರಣ ರಾಜ್ಯದ ಕೆಲವು ಪ್ರದೇಶಗಳಲ್ಲಿ ಭಾನುವಾರವೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

click me!